Advertisement
Opinion

#NagaraPanchami | ನಾಡಿನಾದ್ಯಂತ ನಾಗರಪಂಚಮಿ‌ ಸಂಭ್ರಮ | ಇಂದು ಅರಶಿನ ಎಲೆ, ಹುಡಿಗೆ ವಿಶೇಷ ಸ್ಥಾನ |

Share

ಆಯುರ್ವೇದ ಔಷಧಿಯಲ್ಲಿ ಅರಸಿನವು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನು ಬ್ಯಾಕ್ಟೀರಿಯಾ ನಿವಾರಕ, ವೈರಸ್‌ ನಿವಾರಕ ಹಾಗೂಅಲರ್ಜಿನಿವಾರಕ ಮತ್ತು ಊತ ಗಾಯಗಳಿಗೆ ಅತ್ಯಂತ ಉಪಯೋಗಕಾರಿಯಾಗಿದೆ.

ಇದನ್ನು ಅನೇಕ ಚರ್ಮರೋಗಗಳಲ್ಲಿ ಮಧುಮೇಹದಲ್ಲಿ ಶ್ವಾಸಕೋಶ ಸಂಬಂಧ ಕಾಯಿಲೆಗಳಲ್ಲಿ ಔಷಧಿ ರೂಪದಲ್ಲಿ ಉಪಯೋಗಿಸಲಾಗುತ್ತದೆ. ಹಾಗೂ ಸೌಂದರ್ಯವರ್ಧಕವಾಗಿಯೂ ಉಪಯೋಗಿಸಲಾಗುವುದು ಇದನ್ನು ದಿನನಿತ್ಯದ ಆಹಾರದಲ್ಲೂ ಸಹ ಬಳಸಲಾಗುವುದು. ಅರಸಿನ ಎಲೆಯನ್ನು ಕರಾವಳಿಯ ಜಿಲ್ಲೆಗಳಲ್ಲಿ ನಾಗರಪಂಚಮಿಯ ಹಬ್ಬದಂದು ಸಿಹಿ ಕಡಬು ತಯಾರಿಸಲು ಉಪಯೋಗಿಸುವುದು ಸಾಂಪ್ರದಾಯಿಕವಾಗಿದೆ.

ಇದು ರುಚಿಯ ಜೊತೆಗೆ ಆರೋಗ್ಯಕರವಾದ ಒಂದು ತಿಂಡಿ ಆಗಿದೆ. ಅರಸಿನದ ಎಲೆಗಳನ್ನು ಸುಟ್ಟ ಗಾಯಗಳಲ್ಲಿ, ಚರ್ಮದ ರೋಗಗಳಲ್ಲಿ ಹಾಗೂ ಸೌಂದರ್ಯವರ್ಧಕವಾಗಿ ಉಪಯೋಗಿಸಲಾಗುವುದು. ತೆಂಗಿನ ಮರದಂತೆ ಅರಿಶಿನ ಕೂಡ ತನ್ನ ಪ್ರತಿ ಭಾಗದಲ್ಲಿ ಒಂದಲ್ಲ ಒಂದು ಪ್ರಯೋಜನ ನೀಡುವ ಗಿಡಮೂಲಿಕೆಯಾಗಿದೆ.

ಹಿಂದೂ ಧರ್ಮದಲ್ಲಿ ನಾಗರಪಂಚಮಿಗೆ ವಿಶೇಷ ಮಹತ್ವವಿದೆ. ಈ ದಿನದಂದು ನಾಗದೇವತೆಯನ್ನು ಪೂಜಿಸುವುದರಿಂದ ಮನೆಯಲ್ಲಿ ಸಂತೋಷ ಸಂಭ್ರಮ ಉಂಟಾಗುತ್ತದೆ ಎಂದು ನಂಬಲಾಗಿದೆ. ಹಾಗೆ ಇಂದು ಅರಶಿನ ಹುಡಿಯನ್ನು ನಾಗನ ಕಲ್ಲುಗಳಿಗೆ ಗಂಧವಾಗಿ ಉಪಯೋಗಿಸಲಾಗುತ್ತದೆ. ಭಕ್ತರಿಗೂ ಇದನ್ನೇ ಪ್ರಸಾದವಾಗಿ ನೀಡಲಾಗುತ್ತದೆ.
ಎಲ್ಲರಿಗೂ ನಾಗರ ಪಂಚಮಿ ಹಬ್ಬದ ಶುಭಾಶಯಗಳು, ಎಲ್ಲರೂ ಆರೋಗ್ಯವಂತರಾಗಿರಲಿ ಎಂದು ಹಾರೈಸುವ..

ಬರಹ :
ಡಾ.ಜ್ಯೋತಿ ಕೆ. , ಲಕ್ಷ್ಮೀ ಕ್ಲಿನಿಕ್ ಮಂಗಳೂರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

4 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

11 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

20 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

20 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

22 hours ago