Advertisement
Opinion

#NagaraPanchami | ನಾಡಿನಾದ್ಯಂತ ನಾಗರಪಂಚಮಿ‌ ಸಂಭ್ರಮ | ಇಂದು ಅರಶಿನ ಎಲೆ, ಹುಡಿಗೆ ವಿಶೇಷ ಸ್ಥಾನ |

Share

ಆಯುರ್ವೇದ ಔಷಧಿಯಲ್ಲಿ ಅರಸಿನವು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನು ಬ್ಯಾಕ್ಟೀರಿಯಾ ನಿವಾರಕ, ವೈರಸ್‌ ನಿವಾರಕ ಹಾಗೂಅಲರ್ಜಿನಿವಾರಕ ಮತ್ತು ಊತ ಗಾಯಗಳಿಗೆ ಅತ್ಯಂತ ಉಪಯೋಗಕಾರಿಯಾಗಿದೆ.

ಇದನ್ನು ಅನೇಕ ಚರ್ಮರೋಗಗಳಲ್ಲಿ ಮಧುಮೇಹದಲ್ಲಿ ಶ್ವಾಸಕೋಶ ಸಂಬಂಧ ಕಾಯಿಲೆಗಳಲ್ಲಿ ಔಷಧಿ ರೂಪದಲ್ಲಿ ಉಪಯೋಗಿಸಲಾಗುತ್ತದೆ. ಹಾಗೂ ಸೌಂದರ್ಯವರ್ಧಕವಾಗಿಯೂ ಉಪಯೋಗಿಸಲಾಗುವುದು ಇದನ್ನು ದಿನನಿತ್ಯದ ಆಹಾರದಲ್ಲೂ ಸಹ ಬಳಸಲಾಗುವುದು. ಅರಸಿನ ಎಲೆಯನ್ನು ಕರಾವಳಿಯ ಜಿಲ್ಲೆಗಳಲ್ಲಿ ನಾಗರಪಂಚಮಿಯ ಹಬ್ಬದಂದು ಸಿಹಿ ಕಡಬು ತಯಾರಿಸಲು ಉಪಯೋಗಿಸುವುದು ಸಾಂಪ್ರದಾಯಿಕವಾಗಿದೆ.

ಇದು ರುಚಿಯ ಜೊತೆಗೆ ಆರೋಗ್ಯಕರವಾದ ಒಂದು ತಿಂಡಿ ಆಗಿದೆ. ಅರಸಿನದ ಎಲೆಗಳನ್ನು ಸುಟ್ಟ ಗಾಯಗಳಲ್ಲಿ, ಚರ್ಮದ ರೋಗಗಳಲ್ಲಿ ಹಾಗೂ ಸೌಂದರ್ಯವರ್ಧಕವಾಗಿ ಉಪಯೋಗಿಸಲಾಗುವುದು. ತೆಂಗಿನ ಮರದಂತೆ ಅರಿಶಿನ ಕೂಡ ತನ್ನ ಪ್ರತಿ ಭಾಗದಲ್ಲಿ ಒಂದಲ್ಲ ಒಂದು ಪ್ರಯೋಜನ ನೀಡುವ ಗಿಡಮೂಲಿಕೆಯಾಗಿದೆ.

ಹಿಂದೂ ಧರ್ಮದಲ್ಲಿ ನಾಗರಪಂಚಮಿಗೆ ವಿಶೇಷ ಮಹತ್ವವಿದೆ. ಈ ದಿನದಂದು ನಾಗದೇವತೆಯನ್ನು ಪೂಜಿಸುವುದರಿಂದ ಮನೆಯಲ್ಲಿ ಸಂತೋಷ ಸಂಭ್ರಮ ಉಂಟಾಗುತ್ತದೆ ಎಂದು ನಂಬಲಾಗಿದೆ. ಹಾಗೆ ಇಂದು ಅರಶಿನ ಹುಡಿಯನ್ನು ನಾಗನ ಕಲ್ಲುಗಳಿಗೆ ಗಂಧವಾಗಿ ಉಪಯೋಗಿಸಲಾಗುತ್ತದೆ. ಭಕ್ತರಿಗೂ ಇದನ್ನೇ ಪ್ರಸಾದವಾಗಿ ನೀಡಲಾಗುತ್ತದೆ.
ಎಲ್ಲರಿಗೂ ನಾಗರ ಪಂಚಮಿ ಹಬ್ಬದ ಶುಭಾಶಯಗಳು, ಎಲ್ಲರೂ ಆರೋಗ್ಯವಂತರಾಗಿರಲಿ ಎಂದು ಹಾರೈಸುವ..

ಬರಹ :
ಡಾ.ಜ್ಯೋತಿ ಕೆ. , ಲಕ್ಷ್ಮೀ ಕ್ಲಿನಿಕ್ ಮಂಗಳೂರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

11 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

15 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago