Advertisement
Opinion

#NagaraPanchami | ನಾಡಿನಾದ್ಯಂತ ನಾಗರಪಂಚಮಿ‌ ಸಂಭ್ರಮ | ಇಂದು ಅರಶಿನ ಎಲೆ, ಹುಡಿಗೆ ವಿಶೇಷ ಸ್ಥಾನ |

Share

ಆಯುರ್ವೇದ ಔಷಧಿಯಲ್ಲಿ ಅರಸಿನವು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನು ಬ್ಯಾಕ್ಟೀರಿಯಾ ನಿವಾರಕ, ವೈರಸ್‌ ನಿವಾರಕ ಹಾಗೂಅಲರ್ಜಿನಿವಾರಕ ಮತ್ತು ಊತ ಗಾಯಗಳಿಗೆ ಅತ್ಯಂತ ಉಪಯೋಗಕಾರಿಯಾಗಿದೆ.

ಇದನ್ನು ಅನೇಕ ಚರ್ಮರೋಗಗಳಲ್ಲಿ ಮಧುಮೇಹದಲ್ಲಿ ಶ್ವಾಸಕೋಶ ಸಂಬಂಧ ಕಾಯಿಲೆಗಳಲ್ಲಿ ಔಷಧಿ ರೂಪದಲ್ಲಿ ಉಪಯೋಗಿಸಲಾಗುತ್ತದೆ. ಹಾಗೂ ಸೌಂದರ್ಯವರ್ಧಕವಾಗಿಯೂ ಉಪಯೋಗಿಸಲಾಗುವುದು ಇದನ್ನು ದಿನನಿತ್ಯದ ಆಹಾರದಲ್ಲೂ ಸಹ ಬಳಸಲಾಗುವುದು. ಅರಸಿನ ಎಲೆಯನ್ನು ಕರಾವಳಿಯ ಜಿಲ್ಲೆಗಳಲ್ಲಿ ನಾಗರಪಂಚಮಿಯ ಹಬ್ಬದಂದು ಸಿಹಿ ಕಡಬು ತಯಾರಿಸಲು ಉಪಯೋಗಿಸುವುದು ಸಾಂಪ್ರದಾಯಿಕವಾಗಿದೆ.

ಇದು ರುಚಿಯ ಜೊತೆಗೆ ಆರೋಗ್ಯಕರವಾದ ಒಂದು ತಿಂಡಿ ಆಗಿದೆ. ಅರಸಿನದ ಎಲೆಗಳನ್ನು ಸುಟ್ಟ ಗಾಯಗಳಲ್ಲಿ, ಚರ್ಮದ ರೋಗಗಳಲ್ಲಿ ಹಾಗೂ ಸೌಂದರ್ಯವರ್ಧಕವಾಗಿ ಉಪಯೋಗಿಸಲಾಗುವುದು. ತೆಂಗಿನ ಮರದಂತೆ ಅರಿಶಿನ ಕೂಡ ತನ್ನ ಪ್ರತಿ ಭಾಗದಲ್ಲಿ ಒಂದಲ್ಲ ಒಂದು ಪ್ರಯೋಜನ ನೀಡುವ ಗಿಡಮೂಲಿಕೆಯಾಗಿದೆ.

ಹಿಂದೂ ಧರ್ಮದಲ್ಲಿ ನಾಗರಪಂಚಮಿಗೆ ವಿಶೇಷ ಮಹತ್ವವಿದೆ. ಈ ದಿನದಂದು ನಾಗದೇವತೆಯನ್ನು ಪೂಜಿಸುವುದರಿಂದ ಮನೆಯಲ್ಲಿ ಸಂತೋಷ ಸಂಭ್ರಮ ಉಂಟಾಗುತ್ತದೆ ಎಂದು ನಂಬಲಾಗಿದೆ. ಹಾಗೆ ಇಂದು ಅರಶಿನ ಹುಡಿಯನ್ನು ನಾಗನ ಕಲ್ಲುಗಳಿಗೆ ಗಂಧವಾಗಿ ಉಪಯೋಗಿಸಲಾಗುತ್ತದೆ. ಭಕ್ತರಿಗೂ ಇದನ್ನೇ ಪ್ರಸಾದವಾಗಿ ನೀಡಲಾಗುತ್ತದೆ.
ಎಲ್ಲರಿಗೂ ನಾಗರ ಪಂಚಮಿ ಹಬ್ಬದ ಶುಭಾಶಯಗಳು, ಎಲ್ಲರೂ ಆರೋಗ್ಯವಂತರಾಗಿರಲಿ ಎಂದು ಹಾರೈಸುವ..

ಬರಹ :
ಡಾ.ಜ್ಯೋತಿ ಕೆ. , ಲಕ್ಷ್ಮೀ ಕ್ಲಿನಿಕ್ ಮಂಗಳೂರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

9 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

14 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago