Advertisement
Opinion

#NagaraPanchami | ನಾಡಿನಾದ್ಯಂತ ನಾಗರಪಂಚಮಿ‌ ಸಂಭ್ರಮ | ಇಂದು ಅರಶಿನ ಎಲೆ, ಹುಡಿಗೆ ವಿಶೇಷ ಸ್ಥಾನ |

Share

ಆಯುರ್ವೇದ ಔಷಧಿಯಲ್ಲಿ ಅರಸಿನವು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನು ಬ್ಯಾಕ್ಟೀರಿಯಾ ನಿವಾರಕ, ವೈರಸ್‌ ನಿವಾರಕ ಹಾಗೂಅಲರ್ಜಿನಿವಾರಕ ಮತ್ತು ಊತ ಗಾಯಗಳಿಗೆ ಅತ್ಯಂತ ಉಪಯೋಗಕಾರಿಯಾಗಿದೆ.

ಇದನ್ನು ಅನೇಕ ಚರ್ಮರೋಗಗಳಲ್ಲಿ ಮಧುಮೇಹದಲ್ಲಿ ಶ್ವಾಸಕೋಶ ಸಂಬಂಧ ಕಾಯಿಲೆಗಳಲ್ಲಿ ಔಷಧಿ ರೂಪದಲ್ಲಿ ಉಪಯೋಗಿಸಲಾಗುತ್ತದೆ. ಹಾಗೂ ಸೌಂದರ್ಯವರ್ಧಕವಾಗಿಯೂ ಉಪಯೋಗಿಸಲಾಗುವುದು ಇದನ್ನು ದಿನನಿತ್ಯದ ಆಹಾರದಲ್ಲೂ ಸಹ ಬಳಸಲಾಗುವುದು. ಅರಸಿನ ಎಲೆಯನ್ನು ಕರಾವಳಿಯ ಜಿಲ್ಲೆಗಳಲ್ಲಿ ನಾಗರಪಂಚಮಿಯ ಹಬ್ಬದಂದು ಸಿಹಿ ಕಡಬು ತಯಾರಿಸಲು ಉಪಯೋಗಿಸುವುದು ಸಾಂಪ್ರದಾಯಿಕವಾಗಿದೆ.

ಇದು ರುಚಿಯ ಜೊತೆಗೆ ಆರೋಗ್ಯಕರವಾದ ಒಂದು ತಿಂಡಿ ಆಗಿದೆ. ಅರಸಿನದ ಎಲೆಗಳನ್ನು ಸುಟ್ಟ ಗಾಯಗಳಲ್ಲಿ, ಚರ್ಮದ ರೋಗಗಳಲ್ಲಿ ಹಾಗೂ ಸೌಂದರ್ಯವರ್ಧಕವಾಗಿ ಉಪಯೋಗಿಸಲಾಗುವುದು. ತೆಂಗಿನ ಮರದಂತೆ ಅರಿಶಿನ ಕೂಡ ತನ್ನ ಪ್ರತಿ ಭಾಗದಲ್ಲಿ ಒಂದಲ್ಲ ಒಂದು ಪ್ರಯೋಜನ ನೀಡುವ ಗಿಡಮೂಲಿಕೆಯಾಗಿದೆ.

ಹಿಂದೂ ಧರ್ಮದಲ್ಲಿ ನಾಗರಪಂಚಮಿಗೆ ವಿಶೇಷ ಮಹತ್ವವಿದೆ. ಈ ದಿನದಂದು ನಾಗದೇವತೆಯನ್ನು ಪೂಜಿಸುವುದರಿಂದ ಮನೆಯಲ್ಲಿ ಸಂತೋಷ ಸಂಭ್ರಮ ಉಂಟಾಗುತ್ತದೆ ಎಂದು ನಂಬಲಾಗಿದೆ. ಹಾಗೆ ಇಂದು ಅರಶಿನ ಹುಡಿಯನ್ನು ನಾಗನ ಕಲ್ಲುಗಳಿಗೆ ಗಂಧವಾಗಿ ಉಪಯೋಗಿಸಲಾಗುತ್ತದೆ. ಭಕ್ತರಿಗೂ ಇದನ್ನೇ ಪ್ರಸಾದವಾಗಿ ನೀಡಲಾಗುತ್ತದೆ.
ಎಲ್ಲರಿಗೂ ನಾಗರ ಪಂಚಮಿ ಹಬ್ಬದ ಶುಭಾಶಯಗಳು, ಎಲ್ಲರೂ ಆರೋಗ್ಯವಂತರಾಗಿರಲಿ ಎಂದು ಹಾರೈಸುವ..

ಬರಹ :
ಡಾ.ಜ್ಯೋತಿ ಕೆ. , ಲಕ್ಷ್ಮೀ ಕ್ಲಿನಿಕ್ ಮಂಗಳೂರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

2 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

2 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

10 hours ago