ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಇಂದು ನಾಗರಪಂಚಮಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ನಾಗಬನ, ನಾಗ ಸನ್ನಿಧಿ, ನಾಗ ದೇವಸ್ಥಾನಗಳಲ್ಲಿ ಬೆಳಗ್ಗಿನಿಂದಲೇ ಭಕ್ತರ ದಂಡು ನೆರೆದಿದ್ದು, ನಾಗನಿಗೆ ತನು ಎರೆದು ಪೂಜೆ ಸಲ್ಲಿಸಿದ್ದಾರೆ. ದ ಕ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರಿನ ಕುಡುಪು ಸೇರಿದಂತೆ ವಿವಿಧ ದೇಗುಲಗಳಿಗೆ ಭಕ್ತರ ದಂಡೇ ಹರಿದು ಬಂದಿತ್ತು.
ಉಡುಪಿ ಜಿಲ್ಲೆಯ ವಿವಿಧ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಗಳು, ನಾಗ ಸನ್ನಿಧಿ, ಕುಟುಂಬದ ಮೂಲ ನಾಗಬನಗಳಲ್ಲಿ ನಾಗರ ಪಂಚಮಿಯನ್ನು ಶೃದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಇಂದು ನಾಗರ ಪಂಚಮಿ ಅಂಗವಾಗಿ ವಿಶೇಷ ಪೂಜೆ ನಾಗರಾಧನೆಯನ್ನು ಹಮ್ಮಿಕೊಳ್ಳಲಾಗಿದೆ. ಮುಂಜಾನೆಯಿಂದಲೆ ಭಕ್ತರು ಆಗಮಿಸಿ ನಾಗ ದೇವರ ಕಲ್ಲುಗಳಿಗೆ ಹಾಲಿನ ಅಭಿಷೇಕ ಮಾಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಶ್ರಾವಣ ಮಾಸದ ಹಬ್ಬಗಳ ಸಾಲಿನ ಮೊದಲ ಹಬ್ಬ ನಾಗರ ಪಂಚಮಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶ್ರದ್ಧಾ ಭಕ್ತಿ ಸಂಭ್ರಮಗಳಿಂದ ಆಚರಿಸಲಾಯಿತು. ಜನಪದರಲ್ಲಿ ಅಣ್ಣ ತಂಗಿಯರ ಬಾಂಧವ್ಯದ ಬೆಸುಗೆಯಾಗಿ ಆಚರಿಸಲ್ಪಡುವ ಈ ಹಬ್ಬದಲ್ಲಿ ನಾಗಪೂಜೆ ಪ್ರಮುಖವಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಪುಣ್ಯಕ್ಷೇತ್ರದಲ್ಲಿನ ನಾಗರಕಲ್ಲುಗಳಿಗೆ ಭಕ್ತರು ಹಾಲೆರೆದು ಪೂಜೆ ಸಲ್ಲಿಸಿದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…