ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಇಂದು ನಾಗರಪಂಚಮಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ನಾಗಬನ, ನಾಗ ಸನ್ನಿಧಿ, ನಾಗ ದೇವಸ್ಥಾನಗಳಲ್ಲಿ ಬೆಳಗ್ಗಿನಿಂದಲೇ ಭಕ್ತರ ದಂಡು ನೆರೆದಿದ್ದು, ನಾಗನಿಗೆ ತನು ಎರೆದು ಪೂಜೆ ಸಲ್ಲಿಸಿದ್ದಾರೆ. ದ ಕ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರಿನ ಕುಡುಪು ಸೇರಿದಂತೆ ವಿವಿಧ ದೇಗುಲಗಳಿಗೆ ಭಕ್ತರ ದಂಡೇ ಹರಿದು ಬಂದಿತ್ತು.
ಉಡುಪಿ ಜಿಲ್ಲೆಯ ವಿವಿಧ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಗಳು, ನಾಗ ಸನ್ನಿಧಿ, ಕುಟುಂಬದ ಮೂಲ ನಾಗಬನಗಳಲ್ಲಿ ನಾಗರ ಪಂಚಮಿಯನ್ನು ಶೃದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಇಂದು ನಾಗರ ಪಂಚಮಿ ಅಂಗವಾಗಿ ವಿಶೇಷ ಪೂಜೆ ನಾಗರಾಧನೆಯನ್ನು ಹಮ್ಮಿಕೊಳ್ಳಲಾಗಿದೆ. ಮುಂಜಾನೆಯಿಂದಲೆ ಭಕ್ತರು ಆಗಮಿಸಿ ನಾಗ ದೇವರ ಕಲ್ಲುಗಳಿಗೆ ಹಾಲಿನ ಅಭಿಷೇಕ ಮಾಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಶ್ರಾವಣ ಮಾಸದ ಹಬ್ಬಗಳ ಸಾಲಿನ ಮೊದಲ ಹಬ್ಬ ನಾಗರ ಪಂಚಮಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶ್ರದ್ಧಾ ಭಕ್ತಿ ಸಂಭ್ರಮಗಳಿಂದ ಆಚರಿಸಲಾಯಿತು. ಜನಪದರಲ್ಲಿ ಅಣ್ಣ ತಂಗಿಯರ ಬಾಂಧವ್ಯದ ಬೆಸುಗೆಯಾಗಿ ಆಚರಿಸಲ್ಪಡುವ ಈ ಹಬ್ಬದಲ್ಲಿ ನಾಗಪೂಜೆ ಪ್ರಮುಖವಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಪುಣ್ಯಕ್ಷೇತ್ರದಲ್ಲಿನ ನಾಗರಕಲ್ಲುಗಳಿಗೆ ಭಕ್ತರು ಹಾಲೆರೆದು ಪೂಜೆ ಸಲ್ಲಿಸಿದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…