Advertisement
MIRROR FOCUS

ನಾಗಾಲ್ಯಾಂಡ್‌ ರಾಜ್ಯದಲ್ಲೂ ಅಡಿಕೆ ಬೆಳೆ ಪ್ರಾಧಾನ್ಯತೆ | ವಿಟ್ಲ ಸಿಪಿಸಿಆರ್ ಐ ಗೆ ಭೇಟಿ ನೀಡಿದ ನಾಗಾಲ್ಯಾಂಡ್ ನಿಯೋಗ |

Share

ನಾಗಾಲ್ಯಾಂಡ್ ರಾಜ್ಯದಲ್ಲೂ ಅಡಿಕೆ ಬೆಳೆ ಪ್ರಾಧಾನ್ಯತೆ ಪಡೆಯುತ್ತಿರುವ ಹಿನ್ನಲೆಯಲ್ಲಿ ಅಲ್ಲಿನ ಉನ್ನತ ಮಟ್ಟದ ನಿಯೋಗವು ಅಡಿಕೆಯ ವೈಜ್ಞಾನಿಕ ಕೃಷಿಯನ್ನು ಅಧ್ಯಯನ ಮಾಡುವ ಸಲುವಾಗಿ ವಿಟ್ಲದಲ್ಲಿರುವ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ (ಸಿ.ಪಿ.ಸಿ.ಆರ್.ಐ)ಯ ಪ್ರಾದೇಶಿಕ ಕೇಂದ್ರಕ್ಕೆ ನಾಗಾಲ್ಯಾಂಡ್ ರಾಜ್ಯದ ನಿಯೋಗವು  ಭೇಟಿ ನೀಡಿತು. 

Advertisement
Advertisement

 

Advertisement

ಈ ತಂಡದಲ್ಲಿ ರಾಜ್ಯದ ಅಘುನಟೋ ಪ್ರದೇಶದ ಶಾಸಕರಾಗಿರುವ ಇಕುಟೋ ಶಿಮೋಮಿ, ಕೃಷಿ ನಿರ್ದೇಶಕ ಆಲ್ಬರ್ಟ್ ಗುಲ್ಲಿ , ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿರುವ ವಿಬೆಲ್ಲಿಟೋ ಕೆಟ್ಸ್ ಮತ್ತು ಭೂ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಯಾಗಿರುವ ಆಟೋಕ ಶಿಮೊಮಿ ಇದ್ದರು.ಅಡಿಕೆ ಮತ್ತು ಕೊಕ್ಕೊ ಬೆಳೆಗಳಲ್ಲಿ ಇರುವ ಸುಧಾರಿತ ತಳಿಗಳು ಮತ್ತು ಅವುಗಳ ಸಸ್ಯಾಭಿವೃದ್ಧಿ, ವೈಜ್ಞಾನಿಕ ಬೇಸಾಯ ಕ್ರಮಗಳು, ಮಿಶ್ರ ಬೆಳೆ ಮತ್ತು ಕೀಟ – ರೋಗ ನಿರ್ವಹಣೆ ಕುರಿತು ಮಾಹಿತಿ ಪಡೆದರು.

Advertisement

ಸಿ.ಪಿ.ಸಿ.ಆರ್.ಐ ನಿರ್ದೇಶಕ ಡಾ. ಬಾಲಚಂದ್ರ ಹೆಬ್ಬಾರ್ ಮತ್ತು ವಿಟ್ಲದ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಡಾ. ರಾಜೇಶ್ ಎಂ.ಕೆ. ಮತ್ತು ಇತರ ವಿಜ್ಞಾನಿಗಳು ಉಪಸ್ಥಿತರಿದ್ದರು. ನಾಗಾಲ್ಯಾಂಡ್ ಸರ್ಕಾರದೊಂದಿಗೆ ಜೊತೆಯಾಗಿ ಕೆಲಸ ಮಾಡುವ ಮತ್ತು ಅಲ್ಲಿನ ಕೃಷಿಕರಿಗೆ ನೆರವಾಗುವ ಭರವಸೆ ಅಲ್ಲಿನ ನಿಯೋಗಕ್ಕೆ ಸಿ.ಪಿ.ಸಿ.ಆರ್.ಐ ನಿರ್ದೇಶಕರು ನೀಡಿದರು.

Advertisement

ನಾಗಾಲ್ಯಾಂಡ್ ನಿಯೋಗವು ಕೃಷಿ ಪ್ರಶಸ್ತಿ ವಿಜೇತ ಅಡಿಕೆ – ಕಾಳು ಮೆಣಸು ಬೆಳೆಗಾರರಾದ ಪುತ್ತೂರಿನ ಸುರೇಶ್ ಬಲ್ನಾಡು ಅವರ ತೋಟಕ್ಕೂ ಭೇಟಿ ನೀಡಿತು. ಅಡಿಕೆ, ತೆಂಗು, ರಬ್ಬರ್ ಮತ್ತು ಸಾಗುವಾನಿ ಬೆಳೆಗಳೊಂದಿಗೆ ಮಿಶ್ರ ಬೆಳೆಯಾಗಿ ಯಶಸ್ವಿಗಾಗಿ ಕಾಳುಮೆಣಸನ್ನು ಬೆಳೆದಿರುವುದನ್ನು ನಿಯೋಗವು ಶ್ಲಾಘಿಸಿ, ನಾಗಾಲ್ಯಾಂಡ್ ರಾಜ್ಯದಲ್ಲೂ ಅಡಿಕೆ ಮತ್ತು ಇತರ ಬೆಳೆಗಳೊಂದಿಗೆ ಮಿಶ್ರ ಬೆಳೆಯಾಗಿ ಕಾಳುಮಣಸು ಮತ್ತು ಕೊಕ್ಕೊ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸುವುದಾಗಿ ಶಾಸಕ ಇಕುಟೋ ಶಿಮೋಮಿ ತಿಳಿಸಿದರು. ಮಳೆ ನೀರಿನ ಸಂಗ್ರಹಣೆ ಮತ್ತು ಅದನ್ನು ಕೃಷಿಗೆ ಬಳಸುವ ಕ್ರಮವು ಅನುಕರಣೀಯವೆಂದು ಅವರು ಅಭಿಪ್ರಾಯಪಟ್ಟರು.

Advertisement

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.

2 hours ago

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

1 day ago

ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?

ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..

1 day ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

1 day ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

1 day ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

1 day ago