Advertisement
MIRROR FOCUS

ನಾಗಾಲ್ಯಾಂಡ್‌ ರಾಜ್ಯದಲ್ಲೂ ಅಡಿಕೆ ಬೆಳೆ ಪ್ರಾಧಾನ್ಯತೆ | ವಿಟ್ಲ ಸಿಪಿಸಿಆರ್ ಐ ಗೆ ಭೇಟಿ ನೀಡಿದ ನಾಗಾಲ್ಯಾಂಡ್ ನಿಯೋಗ |

Share

ನಾಗಾಲ್ಯಾಂಡ್ ರಾಜ್ಯದಲ್ಲೂ ಅಡಿಕೆ ಬೆಳೆ ಪ್ರಾಧಾನ್ಯತೆ ಪಡೆಯುತ್ತಿರುವ ಹಿನ್ನಲೆಯಲ್ಲಿ ಅಲ್ಲಿನ ಉನ್ನತ ಮಟ್ಟದ ನಿಯೋಗವು ಅಡಿಕೆಯ ವೈಜ್ಞಾನಿಕ ಕೃಷಿಯನ್ನು ಅಧ್ಯಯನ ಮಾಡುವ ಸಲುವಾಗಿ ವಿಟ್ಲದಲ್ಲಿರುವ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ (ಸಿ.ಪಿ.ಸಿ.ಆರ್.ಐ)ಯ ಪ್ರಾದೇಶಿಕ ಕೇಂದ್ರಕ್ಕೆ ನಾಗಾಲ್ಯಾಂಡ್ ರಾಜ್ಯದ ನಿಯೋಗವು  ಭೇಟಿ ನೀಡಿತು. 

 

ಈ ತಂಡದಲ್ಲಿ ರಾಜ್ಯದ ಅಘುನಟೋ ಪ್ರದೇಶದ ಶಾಸಕರಾಗಿರುವ ಇಕುಟೋ ಶಿಮೋಮಿ, ಕೃಷಿ ನಿರ್ದೇಶಕ ಆಲ್ಬರ್ಟ್ ಗುಲ್ಲಿ , ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿರುವ ವಿಬೆಲ್ಲಿಟೋ ಕೆಟ್ಸ್ ಮತ್ತು ಭೂ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಯಾಗಿರುವ ಆಟೋಕ ಶಿಮೊಮಿ ಇದ್ದರು.ಅಡಿಕೆ ಮತ್ತು ಕೊಕ್ಕೊ ಬೆಳೆಗಳಲ್ಲಿ ಇರುವ ಸುಧಾರಿತ ತಳಿಗಳು ಮತ್ತು ಅವುಗಳ ಸಸ್ಯಾಭಿವೃದ್ಧಿ, ವೈಜ್ಞಾನಿಕ ಬೇಸಾಯ ಕ್ರಮಗಳು, ಮಿಶ್ರ ಬೆಳೆ ಮತ್ತು ಕೀಟ – ರೋಗ ನಿರ್ವಹಣೆ ಕುರಿತು ಮಾಹಿತಿ ಪಡೆದರು.

ಸಿ.ಪಿ.ಸಿ.ಆರ್.ಐ ನಿರ್ದೇಶಕ ಡಾ. ಬಾಲಚಂದ್ರ ಹೆಬ್ಬಾರ್ ಮತ್ತು ವಿಟ್ಲದ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಡಾ. ರಾಜೇಶ್ ಎಂ.ಕೆ. ಮತ್ತು ಇತರ ವಿಜ್ಞಾನಿಗಳು ಉಪಸ್ಥಿತರಿದ್ದರು. ನಾಗಾಲ್ಯಾಂಡ್ ಸರ್ಕಾರದೊಂದಿಗೆ ಜೊತೆಯಾಗಿ ಕೆಲಸ ಮಾಡುವ ಮತ್ತು ಅಲ್ಲಿನ ಕೃಷಿಕರಿಗೆ ನೆರವಾಗುವ ಭರವಸೆ ಅಲ್ಲಿನ ನಿಯೋಗಕ್ಕೆ ಸಿ.ಪಿ.ಸಿ.ಆರ್.ಐ ನಿರ್ದೇಶಕರು ನೀಡಿದರು.

ನಾಗಾಲ್ಯಾಂಡ್ ನಿಯೋಗವು ಕೃಷಿ ಪ್ರಶಸ್ತಿ ವಿಜೇತ ಅಡಿಕೆ – ಕಾಳು ಮೆಣಸು ಬೆಳೆಗಾರರಾದ ಪುತ್ತೂರಿನ ಸುರೇಶ್ ಬಲ್ನಾಡು ಅವರ ತೋಟಕ್ಕೂ ಭೇಟಿ ನೀಡಿತು. ಅಡಿಕೆ, ತೆಂಗು, ರಬ್ಬರ್ ಮತ್ತು ಸಾಗುವಾನಿ ಬೆಳೆಗಳೊಂದಿಗೆ ಮಿಶ್ರ ಬೆಳೆಯಾಗಿ ಯಶಸ್ವಿಗಾಗಿ ಕಾಳುಮೆಣಸನ್ನು ಬೆಳೆದಿರುವುದನ್ನು ನಿಯೋಗವು ಶ್ಲಾಘಿಸಿ, ನಾಗಾಲ್ಯಾಂಡ್ ರಾಜ್ಯದಲ್ಲೂ ಅಡಿಕೆ ಮತ್ತು ಇತರ ಬೆಳೆಗಳೊಂದಿಗೆ ಮಿಶ್ರ ಬೆಳೆಯಾಗಿ ಕಾಳುಮಣಸು ಮತ್ತು ಕೊಕ್ಕೊ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸುವುದಾಗಿ ಶಾಸಕ ಇಕುಟೋ ಶಿಮೋಮಿ ತಿಳಿಸಿದರು. ಮಳೆ ನೀರಿನ ಸಂಗ್ರಹಣೆ ಮತ್ತು ಅದನ್ನು ಕೃಷಿಗೆ ಬಳಸುವ ಕ್ರಮವು ಅನುಕರಣೀಯವೆಂದು ಅವರು ಅಭಿಪ್ರಾಯಪಟ್ಟರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

1 hour ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

1 hour ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

19 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago