ಮಳೆಯ ನೀರು ರಸ್ತೆ ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದಲ್ಲಿ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ನಿರ್ದೇಶನ ನೀಡಿದರು.
ಅವರು ಶುಕ್ರವಾರ ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಗರದಲ್ಲಿ ಮಳೆ ನೀರು ಹರಿದು ಹೋಗದಂತೆ ಎಲ್ಲೆಲ್ಲಿ ಚರಂಡಿಗಳಿಗೆ ತಡೆಗಳನ್ನು ಒಡ್ಡಲಾಗಿದೆಯೋ ಅಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕೂಡಲೇ ತೆರವು ಮಾಡಬೇಕು, ಬೇಕಿದ್ದರೆ ಯಂತ್ರಗಳನ್ನು ಸಹ ಬಳಸಿಕೊಳ್ಳಿ ಎಂದ ಸಂಸದರು, ಅಗತ್ಯವಿದ್ದರೆ ಪೊಲೀಸರ ನೆರವು ಕೂಡ ಪಡೆಯುವಂತೆ ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel