#NalinKumarKateel | ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಳಿನ್‌ ಕುಮಾರ್‌ ಕಟೀಲು |

June 24, 2023
11:57 AM

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಮೌಖಿಕವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗೆಂದು ನಳಿನ್‌ ಕುಮಾರ್‌ ಕಟೀಲು ಅವರು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಅವರು ಹೇಳಿದರು.

Advertisement

ವಿಧಾನಸಭೆ ಚುನಾವಣೆ ಸೋಲಿನ ನೈತಿನ ಹೊಣೆ ಹೊತ್ತು ತಾನು ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಕೆ ಮಾಡಿರುವುದಾಗಿ  ಕಟೀಲ್‌ ಹೇಳಿದ್ದಾರೆ. ನನ್ನ ಅವಧಿ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ.  ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಗರಿಷ್ಠ ಸ್ಥಾನ ಗಳಿಸಲು ಬಿಜೆಪಿಯ ರಾಜ್ಯ ಘಟಕ ಸಿದ್ಧತೆ ಆರಂಭಿಸಿದೆ ಎಂದು  ನಳೀನ್ ಕುಮಾರ್ ಕಟೀಲ್ ಹೇಳಿದರು.

ಪಕ್ಷವು ರಾಜ್ಯದಲ್ಲಿ ಸೋಲು ಕಂಡಿರುವುದು ಅನಿರೀಕ್ಷಿತ. ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ 9 ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ನಂಬಿಕೆ ಇದೆ. ಮುಂದೆ  ಜನಸಂಪರ್ಕ ಅಭಿಯಾನ ನಡೆಸುತ್ತಿದ್ದು, ಅದರ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕಾರ್ಯಕರ್ತರ ಸಭೆಗಳನ್ನು ನಡೆಸಲಾಗುತ್ತದೆ.ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಕೆಲಸ ನಡೆಯುತ್ತದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ರಾಜ್ಯದಲ್ಲಿ  ಗೆಲ್ಲಿಸಿಕೊಡಲು ಕೆಲಸ ಆರಂಭವಾಗುತ್ತದೆ ಎಂದು ನಳಿನ್‌ ಹೇಳಿದರು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-03-2025 | ಕೆಲವು ಕಡೆ ಇಂದೂ ಮಳೆ | ಎ.2 ರಿಂದ ಮುಂಗಾರು ಪೂರ್ವ ಮಳೆಯ ಲಕ್ಷಣ |
March 28, 2025
3:02 PM
by: ಸಾಯಿಶೇಖರ್ ಕರಿಕಳ
ಪಪ್ಪಾಯಿ ಬೆಳೆ ಕಲಿಸಿದ ಕೃಷಿ ಪಾಠ | ಕೃಷಿ ಬದುಕಿಗೊಂದು ಸ್ಫೂರ್ತಿಯ ಮಾತು |
March 28, 2025
8:12 AM
by: ಮಹೇಶ್ ಪುಚ್ಚಪ್ಪಾಡಿ
7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಚಾರ್ ಧಾಮ್ ಹೇಮಕುಂಡ್ ಯಾತ್ರೆಗೆ ನೋಂದಾವಣೆ
March 28, 2025
8:00 AM
by: The Rural Mirror ಸುದ್ದಿಜಾಲ
ಹೇಮಾವತಿ ನದಿ ನೀರಿಗೆ ವಿಷ ಸೇರ್ಪಡೆ : ಮೀನುಗಳ ಸಾವು
March 28, 2025
7:35 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group