ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಮೌಖಿಕವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗೆಂದು ನಳಿನ್ ಕುಮಾರ್ ಕಟೀಲು ಅವರು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಅವರು ಹೇಳಿದರು.
ವಿಧಾನಸಭೆ ಚುನಾವಣೆ ಸೋಲಿನ ನೈತಿನ ಹೊಣೆ ಹೊತ್ತು ತಾನು ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಕೆ ಮಾಡಿರುವುದಾಗಿ ಕಟೀಲ್ ಹೇಳಿದ್ದಾರೆ. ನನ್ನ ಅವಧಿ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಗರಿಷ್ಠ ಸ್ಥಾನ ಗಳಿಸಲು ಬಿಜೆಪಿಯ ರಾಜ್ಯ ಘಟಕ ಸಿದ್ಧತೆ ಆರಂಭಿಸಿದೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದರು.
ಪಕ್ಷವು ರಾಜ್ಯದಲ್ಲಿ ಸೋಲು ಕಂಡಿರುವುದು ಅನಿರೀಕ್ಷಿತ. ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ 9 ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ನಂಬಿಕೆ ಇದೆ. ಮುಂದೆ ಜನಸಂಪರ್ಕ ಅಭಿಯಾನ ನಡೆಸುತ್ತಿದ್ದು, ಅದರ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕಾರ್ಯಕರ್ತರ ಸಭೆಗಳನ್ನು ನಡೆಸಲಾಗುತ್ತದೆ.ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಕೆಲಸ ನಡೆಯುತ್ತದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಿಸಿಕೊಡಲು ಕೆಲಸ ಆರಂಭವಾಗುತ್ತದೆ ಎಂದು ನಳಿನ್ ಹೇಳಿದರು.
ಏಪ್ರಿಲ್ 3 ಹಾಗೂ 4 ರಂದು ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ…
ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…
ಕಡಬ ತಾಲೂಕಿನ ಯೇನೆಕಲ್ಲು ಬಚ್ಚನಾಯಕ ದೈವಸ್ಥಾನದಲ್ಲಿ ವಾರ್ಷಿಕ ನೇಮ ನಡೆಯುತ್ತಿದೆ. ಈ ಸಂದರ್ಭಹವ್ಯಾಸಿ…
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ ಕ್ಷೇತ್ರದಲ್ಲಿ…
ಈಗಿನಂತೆ ಎ.1 ರಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ…