ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಮೌಖಿಕವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗೆಂದು ನಳಿನ್ ಕುಮಾರ್ ಕಟೀಲು ಅವರು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಅವರು ಹೇಳಿದರು.
ವಿಧಾನಸಭೆ ಚುನಾವಣೆ ಸೋಲಿನ ನೈತಿನ ಹೊಣೆ ಹೊತ್ತು ತಾನು ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಕೆ ಮಾಡಿರುವುದಾಗಿ ಕಟೀಲ್ ಹೇಳಿದ್ದಾರೆ. ನನ್ನ ಅವಧಿ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಗರಿಷ್ಠ ಸ್ಥಾನ ಗಳಿಸಲು ಬಿಜೆಪಿಯ ರಾಜ್ಯ ಘಟಕ ಸಿದ್ಧತೆ ಆರಂಭಿಸಿದೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದರು.
ಪಕ್ಷವು ರಾಜ್ಯದಲ್ಲಿ ಸೋಲು ಕಂಡಿರುವುದು ಅನಿರೀಕ್ಷಿತ. ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ 9 ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ನಂಬಿಕೆ ಇದೆ. ಮುಂದೆ ಜನಸಂಪರ್ಕ ಅಭಿಯಾನ ನಡೆಸುತ್ತಿದ್ದು, ಅದರ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕಾರ್ಯಕರ್ತರ ಸಭೆಗಳನ್ನು ನಡೆಸಲಾಗುತ್ತದೆ.ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಕೆಲಸ ನಡೆಯುತ್ತದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಿಸಿಕೊಡಲು ಕೆಲಸ ಆರಂಭವಾಗುತ್ತದೆ ಎಂದು ನಳಿನ್ ಹೇಳಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…