Advertisement
MIRROR FOCUS

ಫಲ ನೀಡದ ನಮೀಬಿಯಾ ಚಿರತೆ ಯೋಜನೆ | ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು : 10 ಕ್ಕೇರಿದ ಸಾವಿನ ಸಂಖ್ಯೆ

Share

ಭಾರತಕ್ಕೆ(India) ಆಫ್ರೀಕಾದಿಂದ(Africa) ಚಿರತೆ(Cheetah) ತಂದು ಮಧ್ಯಪ್ರದೇಶದ(Madyapradesh) ಕುನೋ ರಾಷ್ಟ್ರೀಯ ಉದ್ಯಾನದಲ್ಲಿ (Kuno National Park) ಬಿಟ್ಟಾಗಿಂದ ಒಂದಲ್ಲ ಒಂದು ಕೆಟ್ಟ ಸುದ್ದಿಗಳೇ ಕೇಳಿ ಬರುತ್ತಿದೆ. ಚೀತಗಳು  ಮತ್ತೆ ಭಾರತದಲ್ಲಿ ನೆಲೆಯೋರಬೇಕು. ನಶಿಸಿ ಹೋಗಿದ್ದ ಸಂಸತಿಯನ್ನು ಮತ್ತೆ ಅಭಿವೃದ್ಧಿ ಪಡಿಸಬೇಕು ಎನ್ನುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ(Central Govt) ಈ ಮೆಗಾ ಯೋಜನೆಯನ್ನು ಕೈಗೊಂಡಿತ್ತು. ಆದರೆ ಅದ್ಯಾಕೋ ಫಲ ನೀಡಿದಂತೆ ಕಾಣುತ್ತಿಲ್ಲ.  ಮಂಗಳವಾರ ಮತ್ತೊಂದು ಚಿರತೆ ಸಾವನ್ನಪ್ಪಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆ ಮೂಲಕ ಇಲ್ಲಿ ಚಿರತೆಗಳ ಸಾವಿನ ಸಂಖ್ಯೆ 10 ಕ್ಕೇರಿದೆ.

2022 ರಲ್ಲಿ ನಮೀಬಿಯಾ ಚಿರತೆಗಳನ್ನು (Namibian Cheetah) ಭಾರತದಲ್ಲಿ ಮತ್ತೆ ಪರಿಚಯಿಸಲಾಗಿತ್ತು. ಇಂದು ಮೃತಪಟ್ಟ ನಮೀಬಿಯಾದ ಚಿರತೆ ‘ಶೌರ್ಯ’ ಎಂದು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣ ತಿಳಿಯಲಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಇಲ್ಲಿಯವರೆಗೆ ರಾಷ್ಟ್ರೀಯ ಉದ್ಯಾನದಲ್ಲಿ ಏಳು ವಯಸ್ಕ ಮತ್ತು ಮೂರು ಚಿರತೆ ಮರಿಗಳು ಸಾವನ್ನಪ್ಪಿವೆ. ಮಧ್ಯಾಹ್ನ 3:17 ರ ಸುಮಾರಿಗೆ ನಮೀಬಿಯಾದ ಶೌರ್ಯ ಹೆಸರಿನ ಚಿರತೆ ಕೊನೆಯುಸಿರೆಳೆದಿದೆ.1952 ರಲ್ಲಿ ಭಾರತದಲ್ಲಿ ಚೀತಾಗಳು ಅಳಿವಿನಂಚಿನಲ್ಲಿವೆ ಎಂದು ಘೋಷಿಸಲಾಯಿತು. 2022 ರಲ್ಲಿ ಮತ್ತೆ ಈ ತಳಿಯ ಪ್ರಾಣಿಗಳನ್ನು ಉದ್ಯಾನವನಕ್ಕೆ ತರಲಾಯಿತು. ಚೀತಾಗಳನ್ನು ಎರಡು ಬ್ಯಾಚ್‌ಗಳಲ್ಲಿ ಆಮದು ಮಾಡಿಕೊಳ್ಳಲಾಯಿತು. 2022 ರಲ್ಲಿ ನಮೀಬಿಯಾ ಮತ್ತು 2023 ರಲ್ಲಿ ದಕ್ಷಿಣ ಆಫ್ರಿಕಾದಿಂದ ಅವುಗಳನ್ನು ತರಲಾಗಿತ್ತು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

17 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

18 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

19 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago