Advertisement
MIRROR FOCUS

ನಮೀಬಿಯಾದಲ್ಲಿ ಭೀಕರ ಬರಗಾಲ | ಹಸಿವು ನೀಗಿಸಲು ಆನೆ, ಖಡ್ಗಮೃಗ ಸೇರಿದಂತೆ 723 ಕಾಡು ಪ್ರಾಣಿಗಳ ಮಾಂಸ ವಿತರಣೆಗೆ ಸರ್ಕಾರ ನಿರ್ಧಾರ

Share

ಹಸಿವು ಏನು ಬೇಕಾದರು ಮಾಡಿಸುತ್ತದೆ. ಜಾತಿ, ಬೇಧ, ಮೇಲು-ಕೀಳು, ಪ್ರಾಣಿ-ಪಕ್ಷಿ ಯಾವುದಾದರೂ ಸರಿ.. ಈಗ  ನಮೀಬಿಯಾ ಕತೆ ಕೇಳಿ.. ಅದು  ಹೇಳಿ ಕೇಳಿ ಬಡ ದೇಶ. ಯಾವಾಗಲೂ ಆಹಾರದ ಕೊರತೆ ಅಲ್ಲಿನ ಜನರನ್ನು ಹೈರಣಾಗಿಸುತ್ತಲೇ ಇರುತ್ತದೆ. ಆಹಾರಕ್ಕಾಗಿ ಸಂಘರ್ಷಗಳು ನಡೆಯುತ್ತಲೇ ಇದೆ.  ಈ ಬಾರಿಯ ಬರಗಾಲ ಇಡೀ ನಮೀಬಿಯಾವನ್ನು  ಹೈರಾಣಾಗಿಸಿದೆ.  ಹಸಿವಿನ ಸಂಕಷ್ಟ ಕಾಣಲು ಶುರುವಾಗಿದೆ. ಹೀಗಾಗಿ ನಮೀಬಿಯಾದಲ್ಲಿ  ಸರ್ಕಾರವೇ ಕಾಡುಪ್ರಾಣಿಗಳನ್ನು  ಕೊಲ್ಲಲು ಆದೇಶಿಸಿದೆ. 

Advertisement
Advertisement
ಬರದಿಂದ  ತತ್ತರಿಸಿರುವ ನಮೀಬಿಯಾ ಜನರಿಗೆ ಆಹಾರ ಒದಗಿಸುವ ನಿಟ್ಟಿನಲ್ಲಿ 83 ಆನೆಗಳು (Elephants) ಸೇರಿದಂತೆ 723 ಕಾಡು ಪ್ರಾಣಿಗಳನ್ನು ಕೊಲ್ಲುವ ಯೋಜನೆಯನ್ನು ರೂಪಿಸಿದೆ. ತೀವ್ರ ಬರಗಾಲದಿಂದ ಆಹಾರಕ್ಕಾಗಿ ಹೆಣಗಾಡುತ್ತಿರುವವರಿಗೆ ಮಾಂಸವನ್ನು ವಿತರಿಸುವುದಾಗಿ ಸರ್ಕಾರ ಹೇಳಿದೆ.83 ಆನೆಗಳು, 30 ಹಿಪ್ಪೋಗಳು, 60 ಎಮ್ಮೆಗಳು, 50 ಇಂಪಾಲಾ, 100 ನೀಲಿ ಕಾಡಾನೆಗಳು ಮತ್ತು 300 ಜೀಬ್ರಾಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ ಎಂದು ದೇಶದ ಪರಿಸರ, ಅರಣ್ಯ ಮತ್ತು ಪ್ರವಾಸೋದ್ಯಮ ಸಚಿವಾಲಯ ಸೋಮವಾರ ಪ್ರಕಟಿಸಿದೆ.

ವೃತ್ತಿಪರ ಬೇಟೆಗಾರರು ಮತ್ತು ಸರ್ಕಾರದಿಂದ ಗುತ್ತಿಗೆ ಪಡೆದ ಕಂಪನಿಗಳು ಈಗಾಗಲೇ 157 ಪ್ರಾಣಿಗಳನ್ನು ಬೇಟೆಯಾಡಿ, 56,800 ಕೆಜಿ  ಮಾಂಸವನ್ನು ಜನರಿಗೆ ನೀಡಲಾಗಿದೆ. ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ನಾಗರಿಕರ ಅನುಕೂಲಕ್ಕಾಗಿ ಬಳಸಲು ನಮಗೆ ಸಂವಿಧಾನದಲ್ಲಿ ಅನುಮತಿ ಇದೆ ಎಂದು ನಮೀಬಿಯಾ ಸರ್ಕಾರ ಕಾಡು ಪ್ರಾಣಿಗಳ ಭೇಟೆಯಾಡುವ ಕ್ರಮವನ್ನು ಸಮರ್ಥಿಸಿಕೊಂಡಿದೆ.

Advertisement

ದಕ್ಷಿಣ ಆಫ್ರಿಕಾವು ಪ್ರಸ್ತುತ ದಶಕಗಳಲ್ಲಿ ಅತ್ಯಂತ ಭೀಕರ ಬರವನ್ನು ಅನುಭವಿಸುತ್ತಿದೆ. ವಿಶ್ವಸಂಸ್ಥೆಯು ವರದಿ ಮಾಡಿದಂತೆ ಜುಲೈನಲ್ಲಿ ನಮೀಬಿಯಾ ಸಂಗ್ರಹಿಸಿಟ್ಟಿದ್ದ ಮೀಸಲು ಆಹಾರದಲ್ಲಿ 84% ರಷ್ಟು ಆಹಾರ ಖಾಲಿಯಾಗಿದೆ. ನಮೀಬಿಯಾದ ಜನಸಂಖ್ಯೆಯ ಅರ್ಧದಷ್ಟು ಜನರು ಮುಂಬರುವ ತಿಂಗಳುಗಳಲ್ಲಿ ಭಾರೀ ಆಹಾರದ ಸಮಸ್ಯೆ ಎದುರಿಸಬಹುದು. ಪರಿಸರ ಸಚಿವಾಲಯವು ಕೂಡಲೇ ಮಧ್ಯಪ್ರವೇಶಿಸದಿದ್ದರೆ ಭೀಕರ ಬರಗಾಲವು ಮಾನವ-ವನ್ಯಜೀವಿ ಸಂಘರ್ಷವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಎಚ್ಚರಿಸಿತ್ತು. ಜಿಂಬಾಬ್ವೆ, ಜಾಂಬಿಯಾ, ಬೋಟ್ಸ್ವಾನಾ, ಅಂಗೋಲಾ ಮತ್ತು ನಮೀಬಿಯಾದಲ್ಲಿ ಅಂದಾಜು 2 ಲಕ್ಷ ಆನೆಗಳು ಇದ್ದು, ವಿಶ್ವದಲ್ಲೇ ಅತಿ ಹೆಚ್ಚು ಪ್ರಮಾಣದ ಆನೆಗಳು ಇಲ್ಲಿ ನೆಲೆಸಿವೆ. ಕಳೆದ ವರ್ಷ ಬೋಟ್ಸ್ವಾನಾ ಮತ್ತು ಜಿಂಬಾಬ್ವೆಯಲ್ಲಿ ನೂರಾರು ಆನೆಗಳು ಬರಗಾಲದಿಂದ ಸಾವನ್ನಪ್ಪಿದ್ದವು.

2022 ರಿಂದ ನಮೀಬಿಯಾದ ಒಮಾಹೆಕೆ ಪ್ರದೇಶದಲ್ಲಿ ಸುಮಾರು 800 ಜನರು ಅಪೌಷ್ಟಿಕತೆಯಿಂದ ಸಾವನ್ನಪ್ಪಿದ್ದಾರೆ ಎಂದು ನಮೀಬಿಯನ್ ಕಳೆದ ವಾರ ವರದಿ ಮಾಡಿದೆ. ಅದೇ ಎರಡು ವರ್ಷಗಳ ಅವಧಿಯಲ್ಲಿ ಈ ಪ್ರದೇಶವು 30 219 ಅಪೌಷ್ಟಿಕತೆ ಪ್ರಕರಣಗಳನ್ನು ದಾಖಲಿಸಿದೆ ಎಂದು ವರದಿಯಾಗಿದೆ.

Advertisement

ಈ ನಡುವೆ ನಮೀಬಿಯಾ ಅಧ್ಯಕ್ಷ ನಂಗೊಲೊ  ಅಪೌಷ್ಟಿಕತೆ-ಸಂಬಂಧಿತ ಸಾವುಗಳ ಇತ್ತೀಚಿನ ವರದಿಗಳು ಆತಂಕಕಾರಿ ಎಂದಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನ.14 ರಿಂದ 17 ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…

8 hours ago

ಮೂಲಸೌಕರ್ಯ ಯೋಜನೆಗಳಿಗೆ 15 ಲಕ್ಷ ಕೋಟಿ ರೂ. ಹೂಡಿಕೆ

ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…

9 hours ago

ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |

ಕಲಬುರಗಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ   ಕಲಬುರಗಿಯಲ್ಲಿ …

9 hours ago

ಕೇಂದ್ರ ಸರ್ಕಾರದ ಅಗ್ರಿಶೂರ್ ಯೋಜನೆ ಅನಾವರಣ | ಯೋಜನೆಯಿಂದ ರೈತರಿಗೆ ಸಂತಸ

ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ  ಧನ ಸಹಾಯ ನೀಡುವುದು ಮತ್ತು ರೈತರ…

9 hours ago

ಗ್ರಾಮೀಣ ಪರಿಸರದಲ್ಲಿ ಕೃಷಿ ಜ್ಞಾನಾನುಭವದ ಜೀವಂತ ಸಾಕ್ಷಿ ಬದನಾಜೆ ಶಂಕರ ಭಟ್

ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು…

10 hours ago

ಹವಾಮಾನ ವರದಿ | 18-09-2024 | ದೂರವಾದ ಮಳೆ | ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ |

ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.

18 hours ago