Advertisement
MIRROR FOCUS

ನಮೀಬಿಯಾದಲ್ಲಿ ಭೀಕರ ಬರಗಾಲ | ಹಸಿವು ನೀಗಿಸಲು ಆನೆ, ಖಡ್ಗಮೃಗ ಸೇರಿದಂತೆ 723 ಕಾಡು ಪ್ರಾಣಿಗಳ ಮಾಂಸ ವಿತರಣೆಗೆ ಸರ್ಕಾರ ನಿರ್ಧಾರ

Share

ಹಸಿವು ಏನು ಬೇಕಾದರು ಮಾಡಿಸುತ್ತದೆ. ಜಾತಿ, ಬೇಧ, ಮೇಲು-ಕೀಳು, ಪ್ರಾಣಿ-ಪಕ್ಷಿ ಯಾವುದಾದರೂ ಸರಿ.. ಈಗ  ನಮೀಬಿಯಾ ಕತೆ ಕೇಳಿ.. ಅದು  ಹೇಳಿ ಕೇಳಿ ಬಡ ದೇಶ. ಯಾವಾಗಲೂ ಆಹಾರದ ಕೊರತೆ ಅಲ್ಲಿನ ಜನರನ್ನು ಹೈರಣಾಗಿಸುತ್ತಲೇ ಇರುತ್ತದೆ. ಆಹಾರಕ್ಕಾಗಿ ಸಂಘರ್ಷಗಳು ನಡೆಯುತ್ತಲೇ ಇದೆ.  ಈ ಬಾರಿಯ ಬರಗಾಲ ಇಡೀ ನಮೀಬಿಯಾವನ್ನು  ಹೈರಾಣಾಗಿಸಿದೆ.  ಹಸಿವಿನ ಸಂಕಷ್ಟ ಕಾಣಲು ಶುರುವಾಗಿದೆ. ಹೀಗಾಗಿ ನಮೀಬಿಯಾದಲ್ಲಿ  ಸರ್ಕಾರವೇ ಕಾಡುಪ್ರಾಣಿಗಳನ್ನು  ಕೊಲ್ಲಲು ಆದೇಶಿಸಿದೆ. 

ಬರದಿಂದ  ತತ್ತರಿಸಿರುವ ನಮೀಬಿಯಾ ಜನರಿಗೆ ಆಹಾರ ಒದಗಿಸುವ ನಿಟ್ಟಿನಲ್ಲಿ 83 ಆನೆಗಳು (Elephants) ಸೇರಿದಂತೆ 723 ಕಾಡು ಪ್ರಾಣಿಗಳನ್ನು ಕೊಲ್ಲುವ ಯೋಜನೆಯನ್ನು ರೂಪಿಸಿದೆ. ತೀವ್ರ ಬರಗಾಲದಿಂದ ಆಹಾರಕ್ಕಾಗಿ ಹೆಣಗಾಡುತ್ತಿರುವವರಿಗೆ ಮಾಂಸವನ್ನು ವಿತರಿಸುವುದಾಗಿ ಸರ್ಕಾರ ಹೇಳಿದೆ.83 ಆನೆಗಳು, 30 ಹಿಪ್ಪೋಗಳು, 60 ಎಮ್ಮೆಗಳು, 50 ಇಂಪಾಲಾ, 100 ನೀಲಿ ಕಾಡಾನೆಗಳು ಮತ್ತು 300 ಜೀಬ್ರಾಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ ಎಂದು ದೇಶದ ಪರಿಸರ, ಅರಣ್ಯ ಮತ್ತು ಪ್ರವಾಸೋದ್ಯಮ ಸಚಿವಾಲಯ ಸೋಮವಾರ ಪ್ರಕಟಿಸಿದೆ.

ವೃತ್ತಿಪರ ಬೇಟೆಗಾರರು ಮತ್ತು ಸರ್ಕಾರದಿಂದ ಗುತ್ತಿಗೆ ಪಡೆದ ಕಂಪನಿಗಳು ಈಗಾಗಲೇ 157 ಪ್ರಾಣಿಗಳನ್ನು ಬೇಟೆಯಾಡಿ, 56,800 ಕೆಜಿ  ಮಾಂಸವನ್ನು ಜನರಿಗೆ ನೀಡಲಾಗಿದೆ. ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ನಾಗರಿಕರ ಅನುಕೂಲಕ್ಕಾಗಿ ಬಳಸಲು ನಮಗೆ ಸಂವಿಧಾನದಲ್ಲಿ ಅನುಮತಿ ಇದೆ ಎಂದು ನಮೀಬಿಯಾ ಸರ್ಕಾರ ಕಾಡು ಪ್ರಾಣಿಗಳ ಭೇಟೆಯಾಡುವ ಕ್ರಮವನ್ನು ಸಮರ್ಥಿಸಿಕೊಂಡಿದೆ.

ದಕ್ಷಿಣ ಆಫ್ರಿಕಾವು ಪ್ರಸ್ತುತ ದಶಕಗಳಲ್ಲಿ ಅತ್ಯಂತ ಭೀಕರ ಬರವನ್ನು ಅನುಭವಿಸುತ್ತಿದೆ. ವಿಶ್ವಸಂಸ್ಥೆಯು ವರದಿ ಮಾಡಿದಂತೆ ಜುಲೈನಲ್ಲಿ ನಮೀಬಿಯಾ ಸಂಗ್ರಹಿಸಿಟ್ಟಿದ್ದ ಮೀಸಲು ಆಹಾರದಲ್ಲಿ 84% ರಷ್ಟು ಆಹಾರ ಖಾಲಿಯಾಗಿದೆ. ನಮೀಬಿಯಾದ ಜನಸಂಖ್ಯೆಯ ಅರ್ಧದಷ್ಟು ಜನರು ಮುಂಬರುವ ತಿಂಗಳುಗಳಲ್ಲಿ ಭಾರೀ ಆಹಾರದ ಸಮಸ್ಯೆ ಎದುರಿಸಬಹುದು. ಪರಿಸರ ಸಚಿವಾಲಯವು ಕೂಡಲೇ ಮಧ್ಯಪ್ರವೇಶಿಸದಿದ್ದರೆ ಭೀಕರ ಬರಗಾಲವು ಮಾನವ-ವನ್ಯಜೀವಿ ಸಂಘರ್ಷವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಎಚ್ಚರಿಸಿತ್ತು. ಜಿಂಬಾಬ್ವೆ, ಜಾಂಬಿಯಾ, ಬೋಟ್ಸ್ವಾನಾ, ಅಂಗೋಲಾ ಮತ್ತು ನಮೀಬಿಯಾದಲ್ಲಿ ಅಂದಾಜು 2 ಲಕ್ಷ ಆನೆಗಳು ಇದ್ದು, ವಿಶ್ವದಲ್ಲೇ ಅತಿ ಹೆಚ್ಚು ಪ್ರಮಾಣದ ಆನೆಗಳು ಇಲ್ಲಿ ನೆಲೆಸಿವೆ. ಕಳೆದ ವರ್ಷ ಬೋಟ್ಸ್ವಾನಾ ಮತ್ತು ಜಿಂಬಾಬ್ವೆಯಲ್ಲಿ ನೂರಾರು ಆನೆಗಳು ಬರಗಾಲದಿಂದ ಸಾವನ್ನಪ್ಪಿದ್ದವು.

2022 ರಿಂದ ನಮೀಬಿಯಾದ ಒಮಾಹೆಕೆ ಪ್ರದೇಶದಲ್ಲಿ ಸುಮಾರು 800 ಜನರು ಅಪೌಷ್ಟಿಕತೆಯಿಂದ ಸಾವನ್ನಪ್ಪಿದ್ದಾರೆ ಎಂದು ನಮೀಬಿಯನ್ ಕಳೆದ ವಾರ ವರದಿ ಮಾಡಿದೆ. ಅದೇ ಎರಡು ವರ್ಷಗಳ ಅವಧಿಯಲ್ಲಿ ಈ ಪ್ರದೇಶವು 30 219 ಅಪೌಷ್ಟಿಕತೆ ಪ್ರಕರಣಗಳನ್ನು ದಾಖಲಿಸಿದೆ ಎಂದು ವರದಿಯಾಗಿದೆ.

ಈ ನಡುವೆ ನಮೀಬಿಯಾ ಅಧ್ಯಕ್ಷ ನಂಗೊಲೊ  ಅಪೌಷ್ಟಿಕತೆ-ಸಂಬಂಧಿತ ಸಾವುಗಳ ಇತ್ತೀಚಿನ ವರದಿಗಳು ಆತಂಕಕಾರಿ ಎಂದಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

7 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

7 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

11 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

11 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

11 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

11 hours ago