Advertisement
MIRROR FOCUS

ನಮೀಬಿಯಾದಲ್ಲಿ ಭೀಕರ ಬರಗಾಲ | ಹಸಿವು ನೀಗಿಸಲು ಆನೆ, ಖಡ್ಗಮೃಗ ಸೇರಿದಂತೆ 723 ಕಾಡು ಪ್ರಾಣಿಗಳ ಮಾಂಸ ವಿತರಣೆಗೆ ಸರ್ಕಾರ ನಿರ್ಧಾರ

Share

ಹಸಿವು ಏನು ಬೇಕಾದರು ಮಾಡಿಸುತ್ತದೆ. ಜಾತಿ, ಬೇಧ, ಮೇಲು-ಕೀಳು, ಪ್ರಾಣಿ-ಪಕ್ಷಿ ಯಾವುದಾದರೂ ಸರಿ.. ಈಗ  ನಮೀಬಿಯಾ ಕತೆ ಕೇಳಿ.. ಅದು  ಹೇಳಿ ಕೇಳಿ ಬಡ ದೇಶ. ಯಾವಾಗಲೂ ಆಹಾರದ ಕೊರತೆ ಅಲ್ಲಿನ ಜನರನ್ನು ಹೈರಣಾಗಿಸುತ್ತಲೇ ಇರುತ್ತದೆ. ಆಹಾರಕ್ಕಾಗಿ ಸಂಘರ್ಷಗಳು ನಡೆಯುತ್ತಲೇ ಇದೆ.  ಈ ಬಾರಿಯ ಬರಗಾಲ ಇಡೀ ನಮೀಬಿಯಾವನ್ನು  ಹೈರಾಣಾಗಿಸಿದೆ.  ಹಸಿವಿನ ಸಂಕಷ್ಟ ಕಾಣಲು ಶುರುವಾಗಿದೆ. ಹೀಗಾಗಿ ನಮೀಬಿಯಾದಲ್ಲಿ  ಸರ್ಕಾರವೇ ಕಾಡುಪ್ರಾಣಿಗಳನ್ನು  ಕೊಲ್ಲಲು ಆದೇಶಿಸಿದೆ. 

ಬರದಿಂದ  ತತ್ತರಿಸಿರುವ ನಮೀಬಿಯಾ ಜನರಿಗೆ ಆಹಾರ ಒದಗಿಸುವ ನಿಟ್ಟಿನಲ್ಲಿ 83 ಆನೆಗಳು (Elephants) ಸೇರಿದಂತೆ 723 ಕಾಡು ಪ್ರಾಣಿಗಳನ್ನು ಕೊಲ್ಲುವ ಯೋಜನೆಯನ್ನು ರೂಪಿಸಿದೆ. ತೀವ್ರ ಬರಗಾಲದಿಂದ ಆಹಾರಕ್ಕಾಗಿ ಹೆಣಗಾಡುತ್ತಿರುವವರಿಗೆ ಮಾಂಸವನ್ನು ವಿತರಿಸುವುದಾಗಿ ಸರ್ಕಾರ ಹೇಳಿದೆ.83 ಆನೆಗಳು, 30 ಹಿಪ್ಪೋಗಳು, 60 ಎಮ್ಮೆಗಳು, 50 ಇಂಪಾಲಾ, 100 ನೀಲಿ ಕಾಡಾನೆಗಳು ಮತ್ತು 300 ಜೀಬ್ರಾಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ ಎಂದು ದೇಶದ ಪರಿಸರ, ಅರಣ್ಯ ಮತ್ತು ಪ್ರವಾಸೋದ್ಯಮ ಸಚಿವಾಲಯ ಸೋಮವಾರ ಪ್ರಕಟಿಸಿದೆ.

ವೃತ್ತಿಪರ ಬೇಟೆಗಾರರು ಮತ್ತು ಸರ್ಕಾರದಿಂದ ಗುತ್ತಿಗೆ ಪಡೆದ ಕಂಪನಿಗಳು ಈಗಾಗಲೇ 157 ಪ್ರಾಣಿಗಳನ್ನು ಬೇಟೆಯಾಡಿ, 56,800 ಕೆಜಿ  ಮಾಂಸವನ್ನು ಜನರಿಗೆ ನೀಡಲಾಗಿದೆ. ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ನಾಗರಿಕರ ಅನುಕೂಲಕ್ಕಾಗಿ ಬಳಸಲು ನಮಗೆ ಸಂವಿಧಾನದಲ್ಲಿ ಅನುಮತಿ ಇದೆ ಎಂದು ನಮೀಬಿಯಾ ಸರ್ಕಾರ ಕಾಡು ಪ್ರಾಣಿಗಳ ಭೇಟೆಯಾಡುವ ಕ್ರಮವನ್ನು ಸಮರ್ಥಿಸಿಕೊಂಡಿದೆ.

ದಕ್ಷಿಣ ಆಫ್ರಿಕಾವು ಪ್ರಸ್ತುತ ದಶಕಗಳಲ್ಲಿ ಅತ್ಯಂತ ಭೀಕರ ಬರವನ್ನು ಅನುಭವಿಸುತ್ತಿದೆ. ವಿಶ್ವಸಂಸ್ಥೆಯು ವರದಿ ಮಾಡಿದಂತೆ ಜುಲೈನಲ್ಲಿ ನಮೀಬಿಯಾ ಸಂಗ್ರಹಿಸಿಟ್ಟಿದ್ದ ಮೀಸಲು ಆಹಾರದಲ್ಲಿ 84% ರಷ್ಟು ಆಹಾರ ಖಾಲಿಯಾಗಿದೆ. ನಮೀಬಿಯಾದ ಜನಸಂಖ್ಯೆಯ ಅರ್ಧದಷ್ಟು ಜನರು ಮುಂಬರುವ ತಿಂಗಳುಗಳಲ್ಲಿ ಭಾರೀ ಆಹಾರದ ಸಮಸ್ಯೆ ಎದುರಿಸಬಹುದು. ಪರಿಸರ ಸಚಿವಾಲಯವು ಕೂಡಲೇ ಮಧ್ಯಪ್ರವೇಶಿಸದಿದ್ದರೆ ಭೀಕರ ಬರಗಾಲವು ಮಾನವ-ವನ್ಯಜೀವಿ ಸಂಘರ್ಷವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಎಚ್ಚರಿಸಿತ್ತು. ಜಿಂಬಾಬ್ವೆ, ಜಾಂಬಿಯಾ, ಬೋಟ್ಸ್ವಾನಾ, ಅಂಗೋಲಾ ಮತ್ತು ನಮೀಬಿಯಾದಲ್ಲಿ ಅಂದಾಜು 2 ಲಕ್ಷ ಆನೆಗಳು ಇದ್ದು, ವಿಶ್ವದಲ್ಲೇ ಅತಿ ಹೆಚ್ಚು ಪ್ರಮಾಣದ ಆನೆಗಳು ಇಲ್ಲಿ ನೆಲೆಸಿವೆ. ಕಳೆದ ವರ್ಷ ಬೋಟ್ಸ್ವಾನಾ ಮತ್ತು ಜಿಂಬಾಬ್ವೆಯಲ್ಲಿ ನೂರಾರು ಆನೆಗಳು ಬರಗಾಲದಿಂದ ಸಾವನ್ನಪ್ಪಿದ್ದವು.

2022 ರಿಂದ ನಮೀಬಿಯಾದ ಒಮಾಹೆಕೆ ಪ್ರದೇಶದಲ್ಲಿ ಸುಮಾರು 800 ಜನರು ಅಪೌಷ್ಟಿಕತೆಯಿಂದ ಸಾವನ್ನಪ್ಪಿದ್ದಾರೆ ಎಂದು ನಮೀಬಿಯನ್ ಕಳೆದ ವಾರ ವರದಿ ಮಾಡಿದೆ. ಅದೇ ಎರಡು ವರ್ಷಗಳ ಅವಧಿಯಲ್ಲಿ ಈ ಪ್ರದೇಶವು 30 219 ಅಪೌಷ್ಟಿಕತೆ ಪ್ರಕರಣಗಳನ್ನು ದಾಖಲಿಸಿದೆ ಎಂದು ವರದಿಯಾಗಿದೆ.

ಈ ನಡುವೆ ನಮೀಬಿಯಾ ಅಧ್ಯಕ್ಷ ನಂಗೊಲೊ  ಅಪೌಷ್ಟಿಕತೆ-ಸಂಬಂಧಿತ ಸಾವುಗಳ ಇತ್ತೀಚಿನ ವರದಿಗಳು ಆತಂಕಕಾರಿ ಎಂದಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

4 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

4 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

4 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

4 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

13 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

17 hours ago