Advertisement
ರಾಷ್ಟ್ರೀಯ

ನೂತನ ಜಲಾಂತರ್ಗಾಮಿ ನಿರೋಧಕ ಹಡಗಿಗೆ ನಾಮಕರಣ : ಭಾರತೀಯ ನೌಕಾಪಡೆಯಿಂದ ಕಾರವಾರದ ದ್ವೀಪದ ಹೆಸರು

Share
ಭಾರತೀಯ ನೌಕಾ ಪಡೆ ನಮ್ಮ ಹೆಮ್ಮೆ.. ಅದರಲ್ಲೂ ಕರ್ನಾಟಕದ ಕರಾವಳಿ ತೀರದಲ್ಲಿ ನಮ್ಮ ದೇಶದ ಮೂರನೇ ನೌಕಾ ನೆಲೆ ಕಾರವಾರದಲ್ಲಿ ಸ್ಥಾಪಿತವಾಗಿದೆ.  ನೌಕಾ ನೆಲೆ ಬಂಂದಾಗ ಕಾರವಾರದ ಹೆಸರು ಸದಾ ಜನಜನಿತವಾಗಿರುತ್ತದೆ.  ಇದೀಗ ಭಾರತೀಯ ನೌಕಾ ಪಡೆಗೆ (Indian Navy) ಸೇರ್ಪಡೆಯಾಗಿರುವ ಜಲಾಂತರ್ಗಾಮಿ ನಿರೋಧಕ ಶೆಲ್ಲೋ ವಾಟರ್ ಕ್ರಾಫ್ಟ್ (SWC) ನೌಕೆಗೆ ಕಾರವಾರದ ಅಂಜುದೀವ್  ಎಂಬ ಐತಿಹಾಸಿಕ ದ್ವೀಪದ ಹೆಸರಿಡಲಾಗಿದೆ.
ಕೊಲ್ಕತ್ತಾ ಗಾರ್ಡನ್ ರಿಚ್ ಶಿಪ್‌ಬಿಲ್ಡ್ ಆ್ಯಂಡ್ ಎಂಜಿನಿಯರ್ಸ್ ಎಂಬ ಕಂಪನಿಯಲ್ಲಿ ಹೆಚ್ಚಿನ ದೇಸಿ ತಂತ್ರಜ್ಞಾನ ಹಾಗೂ ಉಪಕರಣ ಬಳಸಿ ನೌಕೆಯನ್ನು ನಿರ್ಮಾಣ ಮಾಡಲಾದ ಹಡಗಿಗೆ, ಬುಧವಾರ ಚೆನ್ನೈನ ಕಟ್ಟುಪಲ್ಲಿಯಲ್ಲಿ ನೌಕೆಯನ್ನು ನೀರಿಗಿಳಿಸಿ ಲೋಕಾರ್ಪಣೆ ಮಾಡಲಾಗಿದೆ. 2019 ರಲ್ಲಿ ಈ ಸಂಬಂಧ ರಕ್ಷಣಾ ಇಲಾಖೆ ಹಾಗೂ ಕಂಪನಿಯ ಜತೆ ಒಪ್ಪಂದವಾಗಿತ್ತು. ಇದುವರೆಗೆ ಇದೇ ಮಾದರಿಯ 2 ಹಡಗುಗಳನ್ನು ನೌಕಾಪಡೆಗೆ ಸೇರಿಸಲಾಗಿದ್ದು, ಇದು 3ನೇ ಹಡಗಾಗಿದೆ. 77ಮೀಟರ್ ಉದ್ದವಿರುವ ಈ ಹಡಗು ಅತ್ಯಾಧುನಿಕ ಯುದ್ಧ ತಂತ್ರಜ್ಞಾನ, ಶಸ್ತ್ರಗಳನ್ನು ಹೊಂದಿದೆ. ಇದು ಗಂಟೆಗೆ 25 ನಾಟಿಕಲ್ ಮೈಲು ವೇಗದಲ್ಲಿ ಸಂಚರಿಸಬಲ್ಲದು.

 

ಕರ್ನಾಟಕದ ಊರುಗಳ ಹೆಸರುಗಳಲ್ಲಿವೆ ನೌಕೆಗಳು: ಭಾರತೀಯ ನೌಕಾಸೇನೆಗೆ ಸೇರ್ಪಡೆಯಾಗುವ ನೌಕೆಗಳಿಗೆ ದೇಶದ ಪ್ರಮುಖ ಊರುಗಳ, ದ್ವೀಪಗಳ ಹೆಸರಿಡುವ ವಾಡಿಕೆ ಇದೆ. ಐಎನ್‌ಎಸ್ ಕಾರವಾರ, ಐಎನ್‌ಎಸ್ ಮೈಸೂರು ಹೀಗೆ ಕರ್ನಾಟಕದ ಊರುಗಳ ಹೆಸರಿನ ಹಲವು ನೌಕೆಗಳು ನೌಕಾಸೇನೆಯಲ್ಲಿ ಕಾರ್ಯನಿರ್ವಹಿಸಿವೆ.

ಎಲ್ಲಿದೆ ಅಂಜುದೀವ್?: ಕಾರವಾರ ನಗರದ ಬಿಣಗಾದಿಂದ ಸಮುದ್ರದಲ್ಲಿ ಸುಮಾರು 3 ಕಿ.ಮೀ ದೂರದಲ್ಲಿರುವುದು ಅಂಜುದೀವ್ ಎಂಬ ಪುಟ್ಟ ದ್ವೀಪ ಕೇವಲ 150 ಹೆಕ್ಟೇರ್ ವ್ಯಾಪ್ತಿಯನ್ನು ಹೊಂದಿದೆ. ಕಾರವಾರದ ಕಣ್ಣಳತೆಯಲ್ಲೇ ಇದ್ದರೂ ಈ ದ್ವೀಪ ತೀರ ಇತ್ತೀಚಿನವರೆಗೆ ಗೋವಾ ರಾಜ್ಯಕ್ಕೆ ಸೇರಿತ್ತು. 2005 ರಿಂದ ಈ ದ್ವೀಪ ಕದಂಬ ನೌಕಾನೆಲೆಯ ವ್ಯಾಪ್ತಿಗೆ ಸೇರಿತು. ದ್ವೀಪಕ್ಕೆ ನೌಕಾಸೇನೆಯು ದಡದಿಂದ ಅಲೆ ತಡೆಗೋಡೆಗಳನ್ನು ನಿರ್ಮಾಣ ಮಾಡಿ, ವಾಹನ ಓಡಾಟದ ವ್ಯವಸ್ಥೆ ಮಾಡಲಾಗಿದೆ. ವಾಸ್ಕೋಡಿಗಾಮ ಸಹ ಈ ದ್ವೀಪದಲ್ಲಿ ತಂಗಿದ್ದ ಇತಿಹಾಸ ಇದೆ.

ಅಂಜುದೀವ್ ರೋಚಕ ಇತಿಹಾಸ: ಇದು ತನ್ನ ಒಡಲಲ್ಲಿ ರೋಚಕವಾದ ಇತಿಹಾಸವನ್ನು ಇಟ್ಟುಕೊಂಡಿದೆ. ಕಾರವಾರವಾದ ಜೊತೆ ಅಂಜುದೀವ್ ದ್ವೀಪ ಅವಿನಾಭಾವ ಸಂಬಂಧ ಹೊಂದಿತ್ತು. ಕಾರವಾರಕ್ಕೆ 1,400 ವರ್ಷಗಳ ಇತಿಹಾಸವಿರುವ ದಾಖಲೆಗಳು ಸಿಗುತ್ತವೆ ಎನ್ನುತ್ತಾರೆ ಇತಿಹಾಸಕಾರರು. 1498 ಕ್ಕೂ ಪೂರ್ವ ಇಲ್ಲಿ ಪೋರ್ಚುಗೀಸರು ನೆಲೆ ಸ್ಥಾಪಿಸಿದರು ಎನ್ನಲಾಗುತ್ತದೆ. ಹಿಂದೂ ಹಾಗೂ ಕ್ಯಾಥೋಲಿಕ್ ಧರ್ಮೀಯರ ಆಸ್ತೆಯ ಐತಿಹಾಸಿಕ ಕೇಂದ್ರಕ್ಕೆ ಈಗ ಭಾರತೀಯ ನೌಕಾಸೇನೆ ಗೌರವ ನೀಡಿದೆ. ಇಲ್ಲಿ ಅಂಜನಾದೇವಿಯ ಮಂದಿರವಿತ್ತು ಎನ್ನಲಾಗುತ್ತದೆ. ಈ ದ್ವೀಪದಲ್ಲಿ ಲೇಡೀಸ್ ಆಫ್ ಸ್ಪಂಗ್ ಚರ್ಚ್ ಹಾಗೂ ಹಲವು ಸ್ಮಾರಕಗಳು ಈಗಲೂ ಇವೆ. ಈ ಹಿಂದೆ ವರ್ಷಕ್ಕೊಮ್ಮೆ ಪೇಸ್ತು (ಕ್ರಿಶ್ವಿಯನ್ ಧಾರ್ಮಿಕ ಹಬ್ಬ) ಆಗುತ್ತಿತ್ತು. ಅದಕ್ಕೆ ಪ್ರವೇಶ ನೀಡುವಂತೆ ಗೋವಾದ ಕೆಲವು ಕ್ಯಾಥೋಲಿಕ್ ಮುಖಂಡರು ನಿರಂತರವಾಗಿ ಒತ್ತಾಯಿಸುತ್ತ ಬಂದಿದ್ದಾರೆ. ಮಾತ್ರವಲ್ಲ ಆ ಸಂಬಂಧ ಗೋವಾದ ನಾಗರಿಕರೊಬ್ಬರು ಪೋರ್ಚುಗಲ್ ಪ್ರಧಾನಿಗೆ ಪತ್ರ ಬರೆದಿದ್ದರು. ಅದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಸದ್ಯ ಭದ್ರತೆಯ ದೃಷ್ಟಿಯಿಂದ ಇಲ್ಲಿ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

7 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

14 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago