MIRROR FOCUS

‘ನಮ್ಮೂರ ಶಾಲೆ ಉಳಿಸೋಣ’ ಯಶಸ್ವಿ ಅಭಿಯಾನ | ಕಲ್ಲುಗುಂಡಿ ಯುವಕರ ಶ್ರಮಕ್ಕೆ ದೈವ-ದೇವರ ಅಭಯ | ದೈವಕ್ಕೆ ಹರಿಕೆ ಸಮರ್ಪಣೆ | ಈ ಅಭಿಯಾನ ಮಾದರಿ ಹೇಗೆ ಗೊತ್ತಾ ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

‘ನಮ್ಮೂರ ಶಾಲೆ ಉಳಿಸೋಣ’. ಇದು ಕಲ್ಲುಗುಂಡಿ-ಸಂಪಾಜೆಯ ಯುವಕರು ಹಮ್ಮಿಕೊಂಡ ಅಭಿಯಾನ. ಯುವಕ, ಪತ್ರಕರ್ತ ಹೇಮಂತ್‌ ಸಂಪಾಜೆ ಹಾಗೂ ಅವರ ತಂಡ ಸರಕಾರಿ ಶಾಲೆ ಉಳಿಸುವ ಹಮ್ಮಿಕೊಂಡ ವಿಶೇಷ ಅಭಿಯಾನವಾಗಿತ್ತು. ಯುವಶಕ್ತಿ ಜಾಗೃತವಾದರೆ ಯಾವ ಕೆಲಸವೂ ಕಷ್ಟವಿಲ್ಲ ಎನ್ನುವುದಕ್ಕೆ ಇದೊಂದು ಮಾದರಿಯೂ ಹೌದು. ಇದೀಗ ಯಶಸ್ವಿಯಾಗಿ ಈ ಅಭಿಯಾನ ಪೂರೈಸಿದ ಬಳಿಕ ಊರಿನ ದೈವಿಕ ಶಕ್ತಿಗಳಾದ ಕೈಪಡ್ಕ ಕೊರಗಜ್ಜ ಸ್ವಾಮಿ, ಶ್ರೀ ಮಹಾವಿಷ್ಣುಮೂರ್ತಿ ದೈವಕ್ಕೆ ಹೇಳಿಕೊಂಡಿದ್ದ ಹರಕೆ ಸಮರ್ಪಿಸಿದರು.

Advertisement
Advertisement

ಕೊರೋನಾ 2 ನೇ ಅಲೆ ಸಂದರ್ಭದಲ್ಲಿ ‘ನಮ್ಮೂರ ಶಾಲೆ ಉಳಿಸೋಣ’ ನಾವು ಓದಿದ ಕನ್ನಡ ಶಾಲೆ ಉಳಿಸುವ ವಾಟ್ಸಪ್ ಅಭಿಯಾನವನ್ನು ಸಂಪಾಜೆಯ ಯುವಕರ ತಂಡ ನಡೆಸಿತ್ತು. ಪತ್ರಕರ್ತ ಹೇಮಂತ್‌ ಸಂಪಾಜೆ ನೇತೃತ್ವದಲ್ಲಿ ನಡೆಸಿದ ಈ ರಾಜಕೀಯ ರಹಿತವಾದ ಅಭಿಯಾನ ಯಶಸ್ವಿಯಾಗಿತ್ತು. ಹಳೆ ವಿದ್ಯಾರ್ಥಿಗಳು, ಊರ-ಪರವೂರ ದಾನಿಗಳನ್ನೆಲ್ಲ ಒಗ್ಗೂಡಿಸಿ 2 ಲಕ್ಷದ 41 ಸಾವಿರಕ್ಕೂ ಅಧಿಕ ಮೊತ್ತ ಸಂಗ್ರಹಿಸಿ ಕಲ್ಲುಗುಂಡಿ ಶಾಲೆಗೆ ಸಿಸಿಟಿವಿ, ಬೆಂಚ್ – ಡೆಸ್ಕ್, ಪ್ರತಿ ಕ್ಲಾಸ್ ರೂಂ ಗೆ ಫ್ಯಾನ್ , ಇನ್ವರ್ಟರ್ ಮೊದಲಾದ ಮೂಲಭೂತ ಸೌಲಭ್ಯ ಕಲ್ಪಿಸಿಕೊಟ್ಟಿದ್ದರು. ಇದಕ್ಕಾಗಿ ಸುಮಾರು  2-3 ತಿಂಗಳು ತಪ್ಪಸ್ಸಿನಂತೆ  ಹಗಲು- ರಾತ್ರಿ ಅನ್ನದೇ ಕೆಲಸ ಮಾಡಿದ್ದರು.

ಯುವಕರ ಈ ಸತತ ಪರಿಶ್ರಮ ಹಾಗೂ ಕೆಲಸಕ್ಕೆ ಭಗವಂತನೂ ಅವಕಾಶ ಕಲ್ಪಿಸಿದ. ಕಳೆದ ವರ್ಷ ಕಲ್ಲುಗುಂಡಿ ಒತ್ತೆಕೋಲದ ಸಮಯದಲ್ಲಿ ಕಲ್ಲುಗುಂಡಿ ಶಾಲೆಗೆ ಸಾಧ್ಯವಾದ ಸಹಾಯಕ್ಕೆ ಸಂಕಲ್ಪ ಮಾಡಿದ್ದರು. ಈಸಂದರ್ಭದಲ್ಲಿ ಊರಿನ ಶಕ್ತಿಗಳಾದ ಕೈಪಡ್ಕ ಕೊರಗಜ್ಜ ಸ್ವಾಮಿ, ಶ್ರೀ ಮಹಾವಿಷ್ಣುಮೂರ್ತಿ ದೈವಕ್ಕೆ ಹರಕೆ ಹೇಳಿಕೊಂಡು ಶಾಲೆಯ ಮೂಲಸೌಕರ್ಯ ಹೆಚ್ಚಿಸುವ ಕೆಲಸದಲ್ಲಿ  ಯಾವುದೇ ಅಡೆತಡೆ ಬರಬಾರದು ಎಂದು ಪ್ರಾರ್ಥಿಸಿಕೊಂಡಿದ್ದರು.

Advertisement

ಟೀಕೆ, ಟಿಪ್ಪಣಿ, ಅಸಹಕಾರದ ನಡುವೆಯೂ ‘ನಮ್ಮೂರ ಶಾಲೆ ಉಳಿಸೋಣ’ ಅಭಿಯಾನ ಇದೀಗ ಯಶಸ್ವಿಯಾಗಿ ಪೂರೈಸಿದ್ದರೆ ಇಲ್ಲಿನ ಯುವಕರು.  ಈ ಹಿನ್ನೆಲೆಯಲ್ಲಿ ದೇವರಿಗೆ ಹೇಳಿಕೊಂಡಿದ್ದ ಹರಕೆಯನ್ನು ತೀರಿಸಿದ್ದಾರೆ. ಹೇಮಂತ್‌ ಸಂಪಾಜೆ ಅವರು ಮಿತ್ರರೆಲ್ಲರ ಸಹಕಾರದೊಂದಿಗೆ ಮಹಾವಿಷ್ಣುವಿಗೆ ಹರಿಕೆಯ ಸುರಿಗೆ (ಖಡ್ಗ) ಒಪ್ಪಿಸಿದ್ದಾರೆ. ಈ ಕಾರ್ಯದಲ್ಲಿ ಜೊತೆಯಾದ ವಿನಯ್ ಸುವರ್ಣ ಹಾಗೂ ಶರತ್ ಕೈಪಡ್ಕ , ಸ್ನೇಹ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಚಂದ್ರಶೇಖರ ದಾಮ್ಲೆ, ನಿವೃತ್ತ ನಬಾರ್ಡ್ ಅಧಿಕಾರಿ ರಮೇಶ್ ತೆಂಕಿಲ್ ಸೇರಿದಂತೆ ಹಲವರನ್ನು ನೆನಪಿಸಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮನ ಗೆಲ್ಲುವ ಕೈರುಚಿ, ಸುಲಭದಲ್ಲಿ ಕೈಸೆರೆಯಾಗದೇಕೆ..?

ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…

9 minutes ago

ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ

ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?

17 minutes ago

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

3 hours ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

6 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

6 hours ago

ಮೇ 18 ರ ನಂತರ ರಾಹು ಕಾಟದಿಂದ ಈ 5 ರಾಶಿಯವರಿಗೆ ಕಷ್ಟಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago