ರಾಷ್ಟ್ರೀಯ

ನಂದಿ ಬೆಟ್ಟಗಳ ರೋಪ್ ವೇ ಯೋಜನೆಗೆ ಅನುಮೋದನೆ ನೀಡಿದ ಕರ್ನಾಟಕ ಸಚಿವ ಸಂಪುಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಾರ್ವಜನಿಕ- ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಯಲ್ಲಿ ನಂದಿ ಬೆಟ್ಟದಲ್ಲಿ ರೂ 93.40 ಕೋಟಿ ರೋಪ್‌ವೇ ಯೋಜನೆಗೆ ಕರ್ನಾಟಕ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ಬೆಂಗಳೂರಿನ ಜನರಿಗೆ ವಾರಾಂತ್ಯದ ವಿಹಾರ ತಾಣವಾದ ನಂದಿಬೆಟ್ಟಗಳು ಪ್ರವಾಸೋದ್ಯಮ ಕೇಂದ್ರವಾಗಿ ಮಾರ್ಪಟ್ಟಿದೆ.

Advertisement

ರೋಪ್‌ವೇ 2.93 ಕಿಮೀ ಉದ್ದವಿದ್ದು, 18 ಗೋಪುರಗಳನ್ನು ಹೊಂದಿರುತ್ತದೆ ಮತ್ತು ಪ್ರತಿ ಸುತ್ತು- ಪ್ರವಾಸವು ಸುಮಾರು 28 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಕ್ಯಾಬಿನೆಟ್ 50 ಕ್ಯಾಬಿನ್‌ಗಳನ್ನು ಅನುಮೋದಿಸಿದೆ, ಪ್ರತಿಯೊಂದು 10 ಪ್ರಯಾಣಿಕರಿಗೆ ಅವಕಾಶ ಕಲ್ಪಿಸುತ್ತದೆ.

ದೀರ್ಘಕಾಲದಿಂದ ಬಾಕಿ ಉಳಿದಿರುವ ರೋಪ್‌ವೇ ಯೋಜನೆ ಶೀಘ್ರದಲ್ಲಿಯೇ ನನಸಾಗಲಿದೆ ಎಂದು ನನಗೆ ತುಂಬಾ ಸಂತೋಷವಾಗುತ್ತಿದೆ. ನಂದಿ ಬೆಟ್ಟ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಲಿದ್ದು, ಚಿಕ್ಕಬಳ್ಳಾಪುರದ ಅಭಿವೃದ್ದಿಯಲ್ಲಿ ಮಹತ್ವದ ಮೈಲಿಗಲ್ಲು ಆಗಲಿದೆ. ಆದರೆ ಅರಣ್ಯದಲ್ಲಿ ಪಿಲ್ಲರ್ ನಿರ್ಮಾಣಕ್ಕೆ ಅನುಮೋದನೆ ನೀಡಲು ಅರಣ್ಯ ಇಲಾಖೆ ಉತ್ಸುಕವಾಗಿಲ್ಲ ಏಕೆಂದರೆ ಪ್ರದೇಶದ ಪರಿಸರ ವ್ಯವಸ್ಥೆಗೆ ಅಡ್ಡಿಯಾಗಬಹುದು ಎನ್ನುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ಹಾಗೂ ಚಿಕ್ಕಬಳ್ಳಾಪುರ ಶಾಸಕ ಕೆ.ಸುಧಾಕರ್ ಹೇಳಿದರು.

ಮೂಲಗಳ ಪ್ರಕಾರ 3,000-4,000 ಕ್ಕೂ ಹೆಚ್ಚು ಕಾರುಗಳು ಪ್ರವಾಸಿ ತಾಣಕ್ಕೆ ಭೇಟ ನೀಡುವುದರಿಂದ ನಂದಿ ಬೆಟ್ಟಗಳಲ್ಲಿ ವಾಹನ ಸಾಂದ್ರತೆಯು ಆತಂಕಕಾರಿಯಾಗಿದೆ. ನಂದಿ ಬೆಟ್ಟಗಳು ವಾರದ ದಿನಗಳಲ್ಲಿ ಸುಮಾರು 3,000 ಮತ್ತು ವಾರಾಂತ್ಯದಲ್ಲಿ 8,000 ಜನರ ಕಾಲ್ನಡಿಗೆಗೆ ಸಾಕ್ಷಿಯಾಗಿದೆ. ಮಾತ್ರವಲ್ಲ ಕೋವಿಡ್ -19  ನಿರ್ಬಂಧಗಳನ್ನು ಸಡಿಲಿಸಿದ ನಂತರ ಕೆಲವು ವಾರಾಂತ್ಯಗಳಲ್ಲಿ 10,000 ಕ್ಕೂ ಹೆಚ್ಚು ಜನರು ಬೆಟ್ಟಗಳಿಗೆ ಭೇಟಿ ನೀಡುವುದನ್ನು ನೋಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ  ಜಮ್ಮು ಮತ್ತು ಕಾಶ್ಮೀರದ…

6 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…

6 hours ago

ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!

ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶದ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಸ್ಥಗಿತವಾಗಿದೆ. 

15 hours ago

ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….

ನಾವೊಂದು ಯೋಚನೆ ಮಾಡಿದ್ದೇವೆ.  ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…

19 hours ago

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ

ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…

23 hours ago