Advertisement
ರಾಷ್ಟ್ರೀಯ

ನಂದಿ ಬೆಟ್ಟಗಳ ರೋಪ್ ವೇ ಯೋಜನೆಗೆ ಅನುಮೋದನೆ ನೀಡಿದ ಕರ್ನಾಟಕ ಸಚಿವ ಸಂಪುಟ

Share

ಸಾರ್ವಜನಿಕ- ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಯಲ್ಲಿ ನಂದಿ ಬೆಟ್ಟದಲ್ಲಿ ರೂ 93.40 ಕೋಟಿ ರೋಪ್‌ವೇ ಯೋಜನೆಗೆ ಕರ್ನಾಟಕ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ಬೆಂಗಳೂರಿನ ಜನರಿಗೆ ವಾರಾಂತ್ಯದ ವಿಹಾರ ತಾಣವಾದ ನಂದಿಬೆಟ್ಟಗಳು ಪ್ರವಾಸೋದ್ಯಮ ಕೇಂದ್ರವಾಗಿ ಮಾರ್ಪಟ್ಟಿದೆ.

ರೋಪ್‌ವೇ 2.93 ಕಿಮೀ ಉದ್ದವಿದ್ದು, 18 ಗೋಪುರಗಳನ್ನು ಹೊಂದಿರುತ್ತದೆ ಮತ್ತು ಪ್ರತಿ ಸುತ್ತು- ಪ್ರವಾಸವು ಸುಮಾರು 28 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಕ್ಯಾಬಿನೆಟ್ 50 ಕ್ಯಾಬಿನ್‌ಗಳನ್ನು ಅನುಮೋದಿಸಿದೆ, ಪ್ರತಿಯೊಂದು 10 ಪ್ರಯಾಣಿಕರಿಗೆ ಅವಕಾಶ ಕಲ್ಪಿಸುತ್ತದೆ.

ದೀರ್ಘಕಾಲದಿಂದ ಬಾಕಿ ಉಳಿದಿರುವ ರೋಪ್‌ವೇ ಯೋಜನೆ ಶೀಘ್ರದಲ್ಲಿಯೇ ನನಸಾಗಲಿದೆ ಎಂದು ನನಗೆ ತುಂಬಾ ಸಂತೋಷವಾಗುತ್ತಿದೆ. ನಂದಿ ಬೆಟ್ಟ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಲಿದ್ದು, ಚಿಕ್ಕಬಳ್ಳಾಪುರದ ಅಭಿವೃದ್ದಿಯಲ್ಲಿ ಮಹತ್ವದ ಮೈಲಿಗಲ್ಲು ಆಗಲಿದೆ. ಆದರೆ ಅರಣ್ಯದಲ್ಲಿ ಪಿಲ್ಲರ್ ನಿರ್ಮಾಣಕ್ಕೆ ಅನುಮೋದನೆ ನೀಡಲು ಅರಣ್ಯ ಇಲಾಖೆ ಉತ್ಸುಕವಾಗಿಲ್ಲ ಏಕೆಂದರೆ ಪ್ರದೇಶದ ಪರಿಸರ ವ್ಯವಸ್ಥೆಗೆ ಅಡ್ಡಿಯಾಗಬಹುದು ಎನ್ನುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ಹಾಗೂ ಚಿಕ್ಕಬಳ್ಳಾಪುರ ಶಾಸಕ ಕೆ.ಸುಧಾಕರ್ ಹೇಳಿದರು.

ಮೂಲಗಳ ಪ್ರಕಾರ 3,000-4,000 ಕ್ಕೂ ಹೆಚ್ಚು ಕಾರುಗಳು ಪ್ರವಾಸಿ ತಾಣಕ್ಕೆ ಭೇಟ ನೀಡುವುದರಿಂದ ನಂದಿ ಬೆಟ್ಟಗಳಲ್ಲಿ ವಾಹನ ಸಾಂದ್ರತೆಯು ಆತಂಕಕಾರಿಯಾಗಿದೆ. ನಂದಿ ಬೆಟ್ಟಗಳು ವಾರದ ದಿನಗಳಲ್ಲಿ ಸುಮಾರು 3,000 ಮತ್ತು ವಾರಾಂತ್ಯದಲ್ಲಿ 8,000 ಜನರ ಕಾಲ್ನಡಿಗೆಗೆ ಸಾಕ್ಷಿಯಾಗಿದೆ. ಮಾತ್ರವಲ್ಲ ಕೋವಿಡ್ -19  ನಿರ್ಬಂಧಗಳನ್ನು ಸಡಿಲಿಸಿದ ನಂತರ ಕೆಲವು ವಾರಾಂತ್ಯಗಳಲ್ಲಿ 10,000 ಕ್ಕೂ ಹೆಚ್ಚು ಜನರು ಬೆಟ್ಟಗಳಿಗೆ ಭೇಟಿ ನೀಡುವುದನ್ನು ನೋಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

7 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago