ಸಾರ್ವಜನಿಕ- ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಯಲ್ಲಿ ನಂದಿ ಬೆಟ್ಟದಲ್ಲಿ ರೂ 93.40 ಕೋಟಿ ರೋಪ್ವೇ ಯೋಜನೆಗೆ ಕರ್ನಾಟಕ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ಬೆಂಗಳೂರಿನ ಜನರಿಗೆ ವಾರಾಂತ್ಯದ ವಿಹಾರ ತಾಣವಾದ ನಂದಿಬೆಟ್ಟಗಳು ಪ್ರವಾಸೋದ್ಯಮ ಕೇಂದ್ರವಾಗಿ ಮಾರ್ಪಟ್ಟಿದೆ.
ರೋಪ್ವೇ 2.93 ಕಿಮೀ ಉದ್ದವಿದ್ದು, 18 ಗೋಪುರಗಳನ್ನು ಹೊಂದಿರುತ್ತದೆ ಮತ್ತು ಪ್ರತಿ ಸುತ್ತು- ಪ್ರವಾಸವು ಸುಮಾರು 28 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಕ್ಯಾಬಿನೆಟ್ 50 ಕ್ಯಾಬಿನ್ಗಳನ್ನು ಅನುಮೋದಿಸಿದೆ, ಪ್ರತಿಯೊಂದು 10 ಪ್ರಯಾಣಿಕರಿಗೆ ಅವಕಾಶ ಕಲ್ಪಿಸುತ್ತದೆ.
ದೀರ್ಘಕಾಲದಿಂದ ಬಾಕಿ ಉಳಿದಿರುವ ರೋಪ್ವೇ ಯೋಜನೆ ಶೀಘ್ರದಲ್ಲಿಯೇ ನನಸಾಗಲಿದೆ ಎಂದು ನನಗೆ ತುಂಬಾ ಸಂತೋಷವಾಗುತ್ತಿದೆ. ನಂದಿ ಬೆಟ್ಟ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಲಿದ್ದು, ಚಿಕ್ಕಬಳ್ಳಾಪುರದ ಅಭಿವೃದ್ದಿಯಲ್ಲಿ ಮಹತ್ವದ ಮೈಲಿಗಲ್ಲು ಆಗಲಿದೆ. ಆದರೆ ಅರಣ್ಯದಲ್ಲಿ ಪಿಲ್ಲರ್ ನಿರ್ಮಾಣಕ್ಕೆ ಅನುಮೋದನೆ ನೀಡಲು ಅರಣ್ಯ ಇಲಾಖೆ ಉತ್ಸುಕವಾಗಿಲ್ಲ ಏಕೆಂದರೆ ಪ್ರದೇಶದ ಪರಿಸರ ವ್ಯವಸ್ಥೆಗೆ ಅಡ್ಡಿಯಾಗಬಹುದು ಎನ್ನುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ಹಾಗೂ ಚಿಕ್ಕಬಳ್ಳಾಪುರ ಶಾಸಕ ಕೆ.ಸುಧಾಕರ್ ಹೇಳಿದರು.
ಮೂಲಗಳ ಪ್ರಕಾರ 3,000-4,000 ಕ್ಕೂ ಹೆಚ್ಚು ಕಾರುಗಳು ಪ್ರವಾಸಿ ತಾಣಕ್ಕೆ ಭೇಟ ನೀಡುವುದರಿಂದ ನಂದಿ ಬೆಟ್ಟಗಳಲ್ಲಿ ವಾಹನ ಸಾಂದ್ರತೆಯು ಆತಂಕಕಾರಿಯಾಗಿದೆ. ನಂದಿ ಬೆಟ್ಟಗಳು ವಾರದ ದಿನಗಳಲ್ಲಿ ಸುಮಾರು 3,000 ಮತ್ತು ವಾರಾಂತ್ಯದಲ್ಲಿ 8,000 ಜನರ ಕಾಲ್ನಡಿಗೆಗೆ ಸಾಕ್ಷಿಯಾಗಿದೆ. ಮಾತ್ರವಲ್ಲ ಕೋವಿಡ್ -19 ನಿರ್ಬಂಧಗಳನ್ನು ಸಡಿಲಿಸಿದ ನಂತರ ಕೆಲವು ವಾರಾಂತ್ಯಗಳಲ್ಲಿ 10,000 ಕ್ಕೂ ಹೆಚ್ಚು ಜನರು ಬೆಟ್ಟಗಳಿಗೆ ಭೇಟಿ ನೀಡುವುದನ್ನು ನೋಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…