Advertisement
MIRROR FOCUS

ನಂದಿನಿ ಹಾಲಿನ ದರ ಹೆಚ್ಚಳ | ಪ್ಯಾಕೇಟ್‌ನಲ್ಲಿ 50 ಎಂಎಲ್ ಹೆಚ್ಚುವರಿ ಹಾಲು |

Share

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು (KMF) ನಂದಿನಿ ಹಾಲಿನ ದರ ಹೆಚ್ಚಿಸಿದೆ (Nandini Milk Price Hike). ಪ್ರತಿ ಲೀಟರ್‌ ಹಾಲಿನ ದರ 2.10 ರೂ. ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.  ಬೆಂಗಳೂರಿನಲ್ಲಿಂದು(Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಆದ್ರೆ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲು ಇನ್ಮುಂದೆ 1,050 ಎಂಎಲ್‌ ಹಾಗೂ ಅರ್ಧ ಲೀಟರ್‌ ಪ್ಯಾಕೆಟ್‌ ಹಾಲು 550 ಎಂಎಲ್‌ ಹೆಚ್ಚುವರಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

Advertisement
Advertisement

ಕರ್ನಾಟಕ ಹಾಲು ಮಂಡಳಿ ಹಾಲು ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಭಾರತದಲ್ಲಿ ಮೊದಲ ಸ್ಥಾನ.  98,17, 000  ಲೀ ಒಟ್ಟು ಹಾಲು ಸಂಗ್ರಹ ಆಗ್ತಿದೆ. ಸದ್ಯದಲ್ಲಿ ಒಂದು ಕೋಟಿ ಸಂಗ್ರಹ ಗುರಿ ಮುಟ್ಟಲಿದೆ. ಇದು ದಾಖಲೆ. ರಾಜ್ಯದ 27 ಲಕ್ಷ ಹಾಲು ಉತ್ಪಾದಕರು ಇದಕ್ಕೆ ಕಾರಣ. ಸದ್ಯದ ಶೇಖರಣೆಯಲ್ಲಿ 30 ಲಕ್ಷ ಪೌಡರ್ ಗೆ ಕಳುಹಿಸುತ್ತಿದ್ದೇವೆ. ಇದರಲ್ಲಿ ನಮ್ಮ ಬಂಡವಾಳ ಸ್ವಲ್ಪ ಡೆಡ್ ಆಗ್ತಿದೆ. 27 ಲಕ್ಷ ಹಾಲು ಉತ್ಪಾದಕ ರು ಗ್ರಾಹಕರಿಗೆ ತೊಂದರೆಯಾಗಬಾರದು. ಇಬ್ಬರು ಕೂಡ ನಮಗೆ ಎರಡು ಕಣ್ಣುಗಳು ಇದ್ದ ಹಾಗೆ ಎಂದು ಅಧ್ಯಕ್ಷರು ಹೇಳಿದರು.

ಲೀಟರ್ ಗೆ ಸದ್ಯ ಗ್ರಾಹಕರಿಗೆ 42 ರೂ ಇದೆ. ಪ್ರತೀ ಹಾಲಿನ ಪ್ಯಾಕೆಟ್ ನಲ್ಲು 50ml ಜಾಸ್ತಿ ಹಾಲು ಇರಲಿದೆ. ಅರ್ಧ ಲೀ ಹಾಲಿನ ಪ್ಯಾಕೆಟ್ ನಲ್ಲು 550 ml ಇರಲಿದೆ. ನಾಳೆಯಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಸಾವಿರ ಎಂಎಲ್ ಬರ್ತಿದ್ದ ಹಾಲು ಇನ್ಮೇಲೆ ಸಾವಿರದ ಐವತ್ತು ಎಂಎಲ್ ಗೆ ಏರಿಕೆಯಾಗಿದೆ. ಇಷ್ಟು ದಿನ ಅರ್ಧ ಲೀ ಪ್ಯಾಕೇಟ್ ನಲ್ಲಿ500 ಎಂಎಲ್ ಇರ್ತಿತ್ತು. ಇನ್ಮುಂದೆ 50 ಎಂಎಲ್ ಹಾಲು‌ ಹೆಚ್ಚುವರಿಯಾಗಿ ಪ್ಯಾಕೇಟ್ ನಲ್ಲಿ ಸಿಗಲಿದೆ. ಹಾಗಾಗಿ ಹೆಚ್ಚುವರಿ ಹಾಲಿಗೆ 2  ರೂ ಹೆಚ್ಚಳ ಮಾಡುತ್ತಿದ್ದೇವೆ.  ಹಾಲು ಹೆಚ್ಚಳ ಮಾಡಿದ್ದಕ್ಕೆ 2ರೂ ದರ ಏರಿಕೆ ಎಂದು ಅವರು ಮಾಹಿತಿ ನೀಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

23 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

23 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

23 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

23 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago