MIRROR FOCUS

ನಂದಿನಿ ಹಾಲಿನ ದರ ಹೆಚ್ಚಳ | ಪ್ಯಾಕೇಟ್‌ನಲ್ಲಿ 50 ಎಂಎಲ್ ಹೆಚ್ಚುವರಿ ಹಾಲು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು (KMF) ನಂದಿನಿ ಹಾಲಿನ ದರ ಹೆಚ್ಚಿಸಿದೆ (Nandini Milk Price Hike). ಪ್ರತಿ ಲೀಟರ್‌ ಹಾಲಿನ ದರ 2.10 ರೂ. ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.  ಬೆಂಗಳೂರಿನಲ್ಲಿಂದು(Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಆದ್ರೆ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲು ಇನ್ಮುಂದೆ 1,050 ಎಂಎಲ್‌ ಹಾಗೂ ಅರ್ಧ ಲೀಟರ್‌ ಪ್ಯಾಕೆಟ್‌ ಹಾಲು 550 ಎಂಎಲ್‌ ಹೆಚ್ಚುವರಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

Advertisement

ಕರ್ನಾಟಕ ಹಾಲು ಮಂಡಳಿ ಹಾಲು ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಭಾರತದಲ್ಲಿ ಮೊದಲ ಸ್ಥಾನ.  98,17, 000  ಲೀ ಒಟ್ಟು ಹಾಲು ಸಂಗ್ರಹ ಆಗ್ತಿದೆ. ಸದ್ಯದಲ್ಲಿ ಒಂದು ಕೋಟಿ ಸಂಗ್ರಹ ಗುರಿ ಮುಟ್ಟಲಿದೆ. ಇದು ದಾಖಲೆ. ರಾಜ್ಯದ 27 ಲಕ್ಷ ಹಾಲು ಉತ್ಪಾದಕರು ಇದಕ್ಕೆ ಕಾರಣ. ಸದ್ಯದ ಶೇಖರಣೆಯಲ್ಲಿ 30 ಲಕ್ಷ ಪೌಡರ್ ಗೆ ಕಳುಹಿಸುತ್ತಿದ್ದೇವೆ. ಇದರಲ್ಲಿ ನಮ್ಮ ಬಂಡವಾಳ ಸ್ವಲ್ಪ ಡೆಡ್ ಆಗ್ತಿದೆ. 27 ಲಕ್ಷ ಹಾಲು ಉತ್ಪಾದಕ ರು ಗ್ರಾಹಕರಿಗೆ ತೊಂದರೆಯಾಗಬಾರದು. ಇಬ್ಬರು ಕೂಡ ನಮಗೆ ಎರಡು ಕಣ್ಣುಗಳು ಇದ್ದ ಹಾಗೆ ಎಂದು ಅಧ್ಯಕ್ಷರು ಹೇಳಿದರು.

ಲೀಟರ್ ಗೆ ಸದ್ಯ ಗ್ರಾಹಕರಿಗೆ 42 ರೂ ಇದೆ. ಪ್ರತೀ ಹಾಲಿನ ಪ್ಯಾಕೆಟ್ ನಲ್ಲು 50ml ಜಾಸ್ತಿ ಹಾಲು ಇರಲಿದೆ. ಅರ್ಧ ಲೀ ಹಾಲಿನ ಪ್ಯಾಕೆಟ್ ನಲ್ಲು 550 ml ಇರಲಿದೆ. ನಾಳೆಯಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಸಾವಿರ ಎಂಎಲ್ ಬರ್ತಿದ್ದ ಹಾಲು ಇನ್ಮೇಲೆ ಸಾವಿರದ ಐವತ್ತು ಎಂಎಲ್ ಗೆ ಏರಿಕೆಯಾಗಿದೆ. ಇಷ್ಟು ದಿನ ಅರ್ಧ ಲೀ ಪ್ಯಾಕೇಟ್ ನಲ್ಲಿ500 ಎಂಎಲ್ ಇರ್ತಿತ್ತು. ಇನ್ಮುಂದೆ 50 ಎಂಎಲ್ ಹಾಲು‌ ಹೆಚ್ಚುವರಿಯಾಗಿ ಪ್ಯಾಕೇಟ್ ನಲ್ಲಿ ಸಿಗಲಿದೆ. ಹಾಗಾಗಿ ಹೆಚ್ಚುವರಿ ಹಾಲಿಗೆ 2  ರೂ ಹೆಚ್ಚಳ ಮಾಡುತ್ತಿದ್ದೇವೆ.  ಹಾಲು ಹೆಚ್ಚಳ ಮಾಡಿದ್ದಕ್ಕೆ 2ರೂ ದರ ಏರಿಕೆ ಎಂದು ಅವರು ಮಾಹಿತಿ ನೀಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…

4 hours ago

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

8 hours ago

ಹೊಸರುಚಿ | ಹಲಸಿನ ಬೀಜದ ಚಟ್ನಿ ಪುಡಿ

ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…

8 hours ago

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

20 hours ago

ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ  ಸಂಭವನೀಯ ದಾಳಿಯ ಬಗ್ಗೆ…

20 hours ago

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

1 day ago