Advertisement
MIRROR FOCUS

ನಂದಿನಿ ಹಾಲಿನ ದರ ಹೆಚ್ಚಳ | ಪ್ಯಾಕೇಟ್‌ನಲ್ಲಿ 50 ಎಂಎಲ್ ಹೆಚ್ಚುವರಿ ಹಾಲು |

Share

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು (KMF) ನಂದಿನಿ ಹಾಲಿನ ದರ ಹೆಚ್ಚಿಸಿದೆ (Nandini Milk Price Hike). ಪ್ರತಿ ಲೀಟರ್‌ ಹಾಲಿನ ದರ 2.10 ರೂ. ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.  ಬೆಂಗಳೂರಿನಲ್ಲಿಂದು(Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಆದ್ರೆ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲು ಇನ್ಮುಂದೆ 1,050 ಎಂಎಲ್‌ ಹಾಗೂ ಅರ್ಧ ಲೀಟರ್‌ ಪ್ಯಾಕೆಟ್‌ ಹಾಲು 550 ಎಂಎಲ್‌ ಹೆಚ್ಚುವರಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

Advertisement
Advertisement

ಕರ್ನಾಟಕ ಹಾಲು ಮಂಡಳಿ ಹಾಲು ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಭಾರತದಲ್ಲಿ ಮೊದಲ ಸ್ಥಾನ.  98,17, 000  ಲೀ ಒಟ್ಟು ಹಾಲು ಸಂಗ್ರಹ ಆಗ್ತಿದೆ. ಸದ್ಯದಲ್ಲಿ ಒಂದು ಕೋಟಿ ಸಂಗ್ರಹ ಗುರಿ ಮುಟ್ಟಲಿದೆ. ಇದು ದಾಖಲೆ. ರಾಜ್ಯದ 27 ಲಕ್ಷ ಹಾಲು ಉತ್ಪಾದಕರು ಇದಕ್ಕೆ ಕಾರಣ. ಸದ್ಯದ ಶೇಖರಣೆಯಲ್ಲಿ 30 ಲಕ್ಷ ಪೌಡರ್ ಗೆ ಕಳುಹಿಸುತ್ತಿದ್ದೇವೆ. ಇದರಲ್ಲಿ ನಮ್ಮ ಬಂಡವಾಳ ಸ್ವಲ್ಪ ಡೆಡ್ ಆಗ್ತಿದೆ. 27 ಲಕ್ಷ ಹಾಲು ಉತ್ಪಾದಕ ರು ಗ್ರಾಹಕರಿಗೆ ತೊಂದರೆಯಾಗಬಾರದು. ಇಬ್ಬರು ಕೂಡ ನಮಗೆ ಎರಡು ಕಣ್ಣುಗಳು ಇದ್ದ ಹಾಗೆ ಎಂದು ಅಧ್ಯಕ್ಷರು ಹೇಳಿದರು.

Advertisement

ಲೀಟರ್ ಗೆ ಸದ್ಯ ಗ್ರಾಹಕರಿಗೆ 42 ರೂ ಇದೆ. ಪ್ರತೀ ಹಾಲಿನ ಪ್ಯಾಕೆಟ್ ನಲ್ಲು 50ml ಜಾಸ್ತಿ ಹಾಲು ಇರಲಿದೆ. ಅರ್ಧ ಲೀ ಹಾಲಿನ ಪ್ಯಾಕೆಟ್ ನಲ್ಲು 550 ml ಇರಲಿದೆ. ನಾಳೆಯಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಸಾವಿರ ಎಂಎಲ್ ಬರ್ತಿದ್ದ ಹಾಲು ಇನ್ಮೇಲೆ ಸಾವಿರದ ಐವತ್ತು ಎಂಎಲ್ ಗೆ ಏರಿಕೆಯಾಗಿದೆ. ಇಷ್ಟು ದಿನ ಅರ್ಧ ಲೀ ಪ್ಯಾಕೇಟ್ ನಲ್ಲಿ500 ಎಂಎಲ್ ಇರ್ತಿತ್ತು. ಇನ್ಮುಂದೆ 50 ಎಂಎಲ್ ಹಾಲು‌ ಹೆಚ್ಚುವರಿಯಾಗಿ ಪ್ಯಾಕೇಟ್ ನಲ್ಲಿ ಸಿಗಲಿದೆ. ಹಾಗಾಗಿ ಹೆಚ್ಚುವರಿ ಹಾಲಿಗೆ 2  ರೂ ಹೆಚ್ಚಳ ಮಾಡುತ್ತಿದ್ದೇವೆ.  ಹಾಲು ಹೆಚ್ಚಳ ಮಾಡಿದ್ದಕ್ಕೆ 2ರೂ ದರ ಏರಿಕೆ ಎಂದು ಅವರು ಮಾಹಿತಿ ನೀಡಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |

ಟರ್ಕಿ ದೇಶದಲ್ಲಿ ಸಜ್ಜೆಯು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಫಸಲುಗಳಲ್ಲಿ ಒಂದಾಗಿದೆ.

5 hours ago

ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ |ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್

ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ…

6 hours ago

ಅಡಿಕೆ ಆಮದು ಚರ್ಚೆಯಾಗುತ್ತಿದ್ದಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | ಅಸ್ಸಾಂ ಗಡಿಯಲ್ಲಿ 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಅಡಿಕೆ ಆಮದು ಚರ್ಚೆಯಾಗುತ್ತಿರುವಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯ ಇನ್ನೊಂದು ಪ್ರಕರಣ ಅಸ್ಸಾಂನಲ್ಲಿ ಪತ್ತೆಯಾಗಿದೆ.…

7 hours ago

ಹವಾಮಾನ ವರದಿ | 28.09.2024 | ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

29.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

14 hours ago

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಾಮೀಣ ಭಾಗಕ್ಕೆ ಹೆಮ್ಮೆಯ ಗರಿ |

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಕುತ್ಲೂರು ಗ್ರಾಮ ಪ್ರಾಕೃತಿಕ ಸೌ೦ದರ್ಯವನ್ನೇ ಹೊದ್ದು ಮಲಗಿದೆ. ಇಂತಹ…

1 day ago