Advertisement
MIRROR FOCUS

ನಂದಿನಿ ಹಾಲಿನ ದರ ಹೆಚ್ಚಳ | ಪ್ಯಾಕೇಟ್‌ನಲ್ಲಿ 50 ಎಂಎಲ್ ಹೆಚ್ಚುವರಿ ಹಾಲು |

Share

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು (KMF) ನಂದಿನಿ ಹಾಲಿನ ದರ ಹೆಚ್ಚಿಸಿದೆ (Nandini Milk Price Hike). ಪ್ರತಿ ಲೀಟರ್‌ ಹಾಲಿನ ದರ 2.10 ರೂ. ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.  ಬೆಂಗಳೂರಿನಲ್ಲಿಂದು(Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಆದ್ರೆ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲು ಇನ್ಮುಂದೆ 1,050 ಎಂಎಲ್‌ ಹಾಗೂ ಅರ್ಧ ಲೀಟರ್‌ ಪ್ಯಾಕೆಟ್‌ ಹಾಲು 550 ಎಂಎಲ್‌ ಹೆಚ್ಚುವರಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಹಾಲು ಮಂಡಳಿ ಹಾಲು ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಭಾರತದಲ್ಲಿ ಮೊದಲ ಸ್ಥಾನ.  98,17, 000  ಲೀ ಒಟ್ಟು ಹಾಲು ಸಂಗ್ರಹ ಆಗ್ತಿದೆ. ಸದ್ಯದಲ್ಲಿ ಒಂದು ಕೋಟಿ ಸಂಗ್ರಹ ಗುರಿ ಮುಟ್ಟಲಿದೆ. ಇದು ದಾಖಲೆ. ರಾಜ್ಯದ 27 ಲಕ್ಷ ಹಾಲು ಉತ್ಪಾದಕರು ಇದಕ್ಕೆ ಕಾರಣ. ಸದ್ಯದ ಶೇಖರಣೆಯಲ್ಲಿ 30 ಲಕ್ಷ ಪೌಡರ್ ಗೆ ಕಳುಹಿಸುತ್ತಿದ್ದೇವೆ. ಇದರಲ್ಲಿ ನಮ್ಮ ಬಂಡವಾಳ ಸ್ವಲ್ಪ ಡೆಡ್ ಆಗ್ತಿದೆ. 27 ಲಕ್ಷ ಹಾಲು ಉತ್ಪಾದಕ ರು ಗ್ರಾಹಕರಿಗೆ ತೊಂದರೆಯಾಗಬಾರದು. ಇಬ್ಬರು ಕೂಡ ನಮಗೆ ಎರಡು ಕಣ್ಣುಗಳು ಇದ್ದ ಹಾಗೆ ಎಂದು ಅಧ್ಯಕ್ಷರು ಹೇಳಿದರು.

ಲೀಟರ್ ಗೆ ಸದ್ಯ ಗ್ರಾಹಕರಿಗೆ 42 ರೂ ಇದೆ. ಪ್ರತೀ ಹಾಲಿನ ಪ್ಯಾಕೆಟ್ ನಲ್ಲು 50ml ಜಾಸ್ತಿ ಹಾಲು ಇರಲಿದೆ. ಅರ್ಧ ಲೀ ಹಾಲಿನ ಪ್ಯಾಕೆಟ್ ನಲ್ಲು 550 ml ಇರಲಿದೆ. ನಾಳೆಯಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಸಾವಿರ ಎಂಎಲ್ ಬರ್ತಿದ್ದ ಹಾಲು ಇನ್ಮೇಲೆ ಸಾವಿರದ ಐವತ್ತು ಎಂಎಲ್ ಗೆ ಏರಿಕೆಯಾಗಿದೆ. ಇಷ್ಟು ದಿನ ಅರ್ಧ ಲೀ ಪ್ಯಾಕೇಟ್ ನಲ್ಲಿ500 ಎಂಎಲ್ ಇರ್ತಿತ್ತು. ಇನ್ಮುಂದೆ 50 ಎಂಎಲ್ ಹಾಲು‌ ಹೆಚ್ಚುವರಿಯಾಗಿ ಪ್ಯಾಕೇಟ್ ನಲ್ಲಿ ಸಿಗಲಿದೆ. ಹಾಗಾಗಿ ಹೆಚ್ಚುವರಿ ಹಾಲಿಗೆ 2  ರೂ ಹೆಚ್ಚಳ ಮಾಡುತ್ತಿದ್ದೇವೆ.  ಹಾಲು ಹೆಚ್ಚಳ ಮಾಡಿದ್ದಕ್ಕೆ 2ರೂ ದರ ಏರಿಕೆ ಎಂದು ಅವರು ಮಾಹಿತಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

5 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

5 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

6 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

6 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

7 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

7 hours ago