Advertisement
MIRROR FOCUS

ನಂದಿನಿ ಹಾಲಿನ ದರ ಹೆಚ್ಚಳ | ಪ್ಯಾಕೇಟ್‌ನಲ್ಲಿ 50 ಎಂಎಲ್ ಹೆಚ್ಚುವರಿ ಹಾಲು |

Share

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು (KMF) ನಂದಿನಿ ಹಾಲಿನ ದರ ಹೆಚ್ಚಿಸಿದೆ (Nandini Milk Price Hike). ಪ್ರತಿ ಲೀಟರ್‌ ಹಾಲಿನ ದರ 2.10 ರೂ. ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.  ಬೆಂಗಳೂರಿನಲ್ಲಿಂದು(Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಆದ್ರೆ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲು ಇನ್ಮುಂದೆ 1,050 ಎಂಎಲ್‌ ಹಾಗೂ ಅರ್ಧ ಲೀಟರ್‌ ಪ್ಯಾಕೆಟ್‌ ಹಾಲು 550 ಎಂಎಲ್‌ ಹೆಚ್ಚುವರಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಹಾಲು ಮಂಡಳಿ ಹಾಲು ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಭಾರತದಲ್ಲಿ ಮೊದಲ ಸ್ಥಾನ.  98,17, 000  ಲೀ ಒಟ್ಟು ಹಾಲು ಸಂಗ್ರಹ ಆಗ್ತಿದೆ. ಸದ್ಯದಲ್ಲಿ ಒಂದು ಕೋಟಿ ಸಂಗ್ರಹ ಗುರಿ ಮುಟ್ಟಲಿದೆ. ಇದು ದಾಖಲೆ. ರಾಜ್ಯದ 27 ಲಕ್ಷ ಹಾಲು ಉತ್ಪಾದಕರು ಇದಕ್ಕೆ ಕಾರಣ. ಸದ್ಯದ ಶೇಖರಣೆಯಲ್ಲಿ 30 ಲಕ್ಷ ಪೌಡರ್ ಗೆ ಕಳುಹಿಸುತ್ತಿದ್ದೇವೆ. ಇದರಲ್ಲಿ ನಮ್ಮ ಬಂಡವಾಳ ಸ್ವಲ್ಪ ಡೆಡ್ ಆಗ್ತಿದೆ. 27 ಲಕ್ಷ ಹಾಲು ಉತ್ಪಾದಕ ರು ಗ್ರಾಹಕರಿಗೆ ತೊಂದರೆಯಾಗಬಾರದು. ಇಬ್ಬರು ಕೂಡ ನಮಗೆ ಎರಡು ಕಣ್ಣುಗಳು ಇದ್ದ ಹಾಗೆ ಎಂದು ಅಧ್ಯಕ್ಷರು ಹೇಳಿದರು.

ಲೀಟರ್ ಗೆ ಸದ್ಯ ಗ್ರಾಹಕರಿಗೆ 42 ರೂ ಇದೆ. ಪ್ರತೀ ಹಾಲಿನ ಪ್ಯಾಕೆಟ್ ನಲ್ಲು 50ml ಜಾಸ್ತಿ ಹಾಲು ಇರಲಿದೆ. ಅರ್ಧ ಲೀ ಹಾಲಿನ ಪ್ಯಾಕೆಟ್ ನಲ್ಲು 550 ml ಇರಲಿದೆ. ನಾಳೆಯಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಸಾವಿರ ಎಂಎಲ್ ಬರ್ತಿದ್ದ ಹಾಲು ಇನ್ಮೇಲೆ ಸಾವಿರದ ಐವತ್ತು ಎಂಎಲ್ ಗೆ ಏರಿಕೆಯಾಗಿದೆ. ಇಷ್ಟು ದಿನ ಅರ್ಧ ಲೀ ಪ್ಯಾಕೇಟ್ ನಲ್ಲಿ500 ಎಂಎಲ್ ಇರ್ತಿತ್ತು. ಇನ್ಮುಂದೆ 50 ಎಂಎಲ್ ಹಾಲು‌ ಹೆಚ್ಚುವರಿಯಾಗಿ ಪ್ಯಾಕೇಟ್ ನಲ್ಲಿ ಸಿಗಲಿದೆ. ಹಾಗಾಗಿ ಹೆಚ್ಚುವರಿ ಹಾಲಿಗೆ 2  ರೂ ಹೆಚ್ಚಳ ಮಾಡುತ್ತಿದ್ದೇವೆ.  ಹಾಲು ಹೆಚ್ಚಳ ಮಾಡಿದ್ದಕ್ಕೆ 2ರೂ ದರ ಏರಿಕೆ ಎಂದು ಅವರು ಮಾಹಿತಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

5 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

6 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

11 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 day ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago