ನಂದಿನಿ ಹಾಲಿನ ದರ 2 ರೂಪಾಯಿ ಇಳಿಕೆ | 50 ಎಲ್ ಹೆಚ್ಚುವರಿ ಹಾಲು ಕಡಿತ | ನಂದಿನಿಯಿಂದ ಇಡ್ಲಿ ಮತ್ತು ದೋಸೆ ಹಿಟ್ಟು ಬಿಡುಗಡೆ

December 27, 2024
11:13 AM
ನಂದಿನಿ ಹಾಲಿನ ದರ 2 ರೂಪಾಯಿ ಇಳಿಕೆಗೆ ನಿರ್ಧಾರ.

ಕೆಎಂಎಫ್‌ಗೆ ಹೆಚ್ಚಿನ ಹಾಲು ಹರಿದು ಬಂದಿದ್ದ ಹಿನ್ನೆಲೆಯಲ್ಲಿ ಪ್ಯಾಕೆಟ್‌ನಲ್ಲಿ ನೀಡಲಾಗುತ್ತಿದ್ದ ಹಾಲಿನ ಪ್ರಮಾಣವನ್ನು 50 ಎಂಎಲ್ ಹೆಚ್ಚಿಸಿ ದರವನ್ನೂ 2 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಹಾಲಿನ ಜೊತೆ ದರವನ್ನೂ ಹಿಂಪಡೆಯುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಘೋಷಿಸಿದ್ದಾರೆ.…..ಮುಂದೆ ಓದಿ….

Advertisement
Advertisement
Advertisement
Advertisement

ಬೆಂಗಳೂರಿನಲ್ಲಿ ಮಾತನಾಡಿದ ಅವರು, 50 ಎಂ.ಎಲ್. ಹೆಚ್ಚುವರಿ ಹಾಲು ವಾಪಸ್ಸಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಇತರೆಡೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಹಿಟ್ಟಿಗೆ ಹೆಚ್ಚುವರಿಯಾಗಿ ಪ್ರೋಟಿನ್ ಸೇರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement

ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ – ಕೆಎಂಎಫ್‌ನ ನಂದಿನಿ ವತಿಯಿಂದ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ಇಡ್ಲಿ ಮತ್ತು ದೋಸೆ ಹಿಟ್ಟು ಬಿಡುಗಡೆ ಮಾಡಲಾಗಿದೆ. ನಂದಿನಿ ವೇ ಪ್ರೋಟಿನ್ ಆಧಾರಿತ ಈ ಉತ್ಪನ್ನಗಳನ್ನು ನಂದಿನಿ ಇದೇ ಮೊದಲ ಬಾರಿಗೆ ಉತ್ಪಾದಿಸಿ ಮಾರಾಟ ಮಾಡುತ್ತಿದೆ. ಪ್ರಾಯೋಗಿಕವಾಗಿ ಬೆಂಗಳೂರು ನಗರದಲ್ಲಿ ನಂದಿನಿ ಬ್ರಾಂಡ್‌ನ ಇಡ್ಲಿ ದೋಸೆ ಹಿಟ್ಟು ಎರಡು ವಿಧದ ಪ್ಯಾಕ್‌ಗಳಲ್ಲಿ ಲಭ್ಯವಿರುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
March 3, 2025
7:42 AM
by: The Rural Mirror ಸುದ್ದಿಜಾಲ
Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |
March 3, 2025
7:28 AM
by: The Rural Mirror ಸುದ್ದಿಜಾಲ
ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!
March 3, 2025
7:06 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

You cannot copy content of this page - Copyright -The Rural Mirror