ಕೆಎಂಎಫ್ಗೆ ಹೆಚ್ಚಿನ ಹಾಲು ಹರಿದು ಬಂದಿದ್ದ ಹಿನ್ನೆಲೆಯಲ್ಲಿ ಪ್ಯಾಕೆಟ್ನಲ್ಲಿ ನೀಡಲಾಗುತ್ತಿದ್ದ ಹಾಲಿನ ಪ್ರಮಾಣವನ್ನು 50 ಎಂಎಲ್ ಹೆಚ್ಚಿಸಿ ದರವನ್ನೂ 2 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಹಾಲಿನ ಜೊತೆ ದರವನ್ನೂ ಹಿಂಪಡೆಯುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಘೋಷಿಸಿದ್ದಾರೆ.…..ಮುಂದೆ ಓದಿ….
ಬೆಂಗಳೂರಿನಲ್ಲಿ ಮಾತನಾಡಿದ ಅವರು, 50 ಎಂ.ಎಲ್. ಹೆಚ್ಚುವರಿ ಹಾಲು ವಾಪಸ್ಸಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಇತರೆಡೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಹಿಟ್ಟಿಗೆ ಹೆಚ್ಚುವರಿಯಾಗಿ ಪ್ರೋಟಿನ್ ಸೇರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ – ಕೆಎಂಎಫ್ನ ನಂದಿನಿ ವತಿಯಿಂದ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ಇಡ್ಲಿ ಮತ್ತು ದೋಸೆ ಹಿಟ್ಟು ಬಿಡುಗಡೆ ಮಾಡಲಾಗಿದೆ. ನಂದಿನಿ ವೇ ಪ್ರೋಟಿನ್ ಆಧಾರಿತ ಈ ಉತ್ಪನ್ನಗಳನ್ನು ನಂದಿನಿ ಇದೇ ಮೊದಲ ಬಾರಿಗೆ ಉತ್ಪಾದಿಸಿ ಮಾರಾಟ ಮಾಡುತ್ತಿದೆ. ಪ್ರಾಯೋಗಿಕವಾಗಿ ಬೆಂಗಳೂರು ನಗರದಲ್ಲಿ ನಂದಿನಿ ಬ್ರಾಂಡ್ನ ಇಡ್ಲಿ ದೋಸೆ ಹಿಟ್ಟು ಎರಡು ವಿಧದ ಪ್ಯಾಕ್ಗಳಲ್ಲಿ ಲಭ್ಯವಿರುತ್ತದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…