ಕೆಎಂಎಫ್ಗೆ ಹೆಚ್ಚಿನ ಹಾಲು ಹರಿದು ಬಂದಿದ್ದ ಹಿನ್ನೆಲೆಯಲ್ಲಿ ಪ್ಯಾಕೆಟ್ನಲ್ಲಿ ನೀಡಲಾಗುತ್ತಿದ್ದ ಹಾಲಿನ ಪ್ರಮಾಣವನ್ನು 50 ಎಂಎಲ್ ಹೆಚ್ಚಿಸಿ ದರವನ್ನೂ 2 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಹಾಲಿನ ಜೊತೆ ದರವನ್ನೂ ಹಿಂಪಡೆಯುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಘೋಷಿಸಿದ್ದಾರೆ.…..ಮುಂದೆ ಓದಿ….
ಬೆಂಗಳೂರಿನಲ್ಲಿ ಮಾತನಾಡಿದ ಅವರು, 50 ಎಂ.ಎಲ್. ಹೆಚ್ಚುವರಿ ಹಾಲು ವಾಪಸ್ಸಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಇತರೆಡೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಹಿಟ್ಟಿಗೆ ಹೆಚ್ಚುವರಿಯಾಗಿ ಪ್ರೋಟಿನ್ ಸೇರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ – ಕೆಎಂಎಫ್ನ ನಂದಿನಿ ವತಿಯಿಂದ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ಇಡ್ಲಿ ಮತ್ತು ದೋಸೆ ಹಿಟ್ಟು ಬಿಡುಗಡೆ ಮಾಡಲಾಗಿದೆ. ನಂದಿನಿ ವೇ ಪ್ರೋಟಿನ್ ಆಧಾರಿತ ಈ ಉತ್ಪನ್ನಗಳನ್ನು ನಂದಿನಿ ಇದೇ ಮೊದಲ ಬಾರಿಗೆ ಉತ್ಪಾದಿಸಿ ಮಾರಾಟ ಮಾಡುತ್ತಿದೆ. ಪ್ರಾಯೋಗಿಕವಾಗಿ ಬೆಂಗಳೂರು ನಗರದಲ್ಲಿ ನಂದಿನಿ ಬ್ರಾಂಡ್ನ ಇಡ್ಲಿ ದೋಸೆ ಹಿಟ್ಟು ಎರಡು ವಿಧದ ಪ್ಯಾಕ್ಗಳಲ್ಲಿ ಲಭ್ಯವಿರುತ್ತದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…