ಕೆಎಂಎಫ್ಗೆ ಹೆಚ್ಚಿನ ಹಾಲು ಹರಿದು ಬಂದಿದ್ದ ಹಿನ್ನೆಲೆಯಲ್ಲಿ ಪ್ಯಾಕೆಟ್ನಲ್ಲಿ ನೀಡಲಾಗುತ್ತಿದ್ದ ಹಾಲಿನ ಪ್ರಮಾಣವನ್ನು 50 ಎಂಎಲ್ ಹೆಚ್ಚಿಸಿ ದರವನ್ನೂ 2 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಹಾಲಿನ ಜೊತೆ ದರವನ್ನೂ ಹಿಂಪಡೆಯುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಘೋಷಿಸಿದ್ದಾರೆ.…..ಮುಂದೆ ಓದಿ….
ಬೆಂಗಳೂರಿನಲ್ಲಿ ಮಾತನಾಡಿದ ಅವರು, 50 ಎಂ.ಎಲ್. ಹೆಚ್ಚುವರಿ ಹಾಲು ವಾಪಸ್ಸಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಇತರೆಡೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಹಿಟ್ಟಿಗೆ ಹೆಚ್ಚುವರಿಯಾಗಿ ಪ್ರೋಟಿನ್ ಸೇರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ – ಕೆಎಂಎಫ್ನ ನಂದಿನಿ ವತಿಯಿಂದ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ಇಡ್ಲಿ ಮತ್ತು ದೋಸೆ ಹಿಟ್ಟು ಬಿಡುಗಡೆ ಮಾಡಲಾಗಿದೆ. ನಂದಿನಿ ವೇ ಪ್ರೋಟಿನ್ ಆಧಾರಿತ ಈ ಉತ್ಪನ್ನಗಳನ್ನು ನಂದಿನಿ ಇದೇ ಮೊದಲ ಬಾರಿಗೆ ಉತ್ಪಾದಿಸಿ ಮಾರಾಟ ಮಾಡುತ್ತಿದೆ. ಪ್ರಾಯೋಗಿಕವಾಗಿ ಬೆಂಗಳೂರು ನಗರದಲ್ಲಿ ನಂದಿನಿ ಬ್ರಾಂಡ್ನ ಇಡ್ಲಿ ದೋಸೆ ಹಿಟ್ಟು ಎರಡು ವಿಧದ ಪ್ಯಾಕ್ಗಳಲ್ಲಿ ಲಭ್ಯವಿರುತ್ತದೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…