ಕೆಎಂಎಫ್ಗೆ ಹೆಚ್ಚಿನ ಹಾಲು ಹರಿದು ಬಂದಿದ್ದ ಹಿನ್ನೆಲೆಯಲ್ಲಿ ಪ್ಯಾಕೆಟ್ನಲ್ಲಿ ನೀಡಲಾಗುತ್ತಿದ್ದ ಹಾಲಿನ ಪ್ರಮಾಣವನ್ನು 50 ಎಂಎಲ್ ಹೆಚ್ಚಿಸಿ ದರವನ್ನೂ 2 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಹಾಲಿನ ಜೊತೆ ದರವನ್ನೂ ಹಿಂಪಡೆಯುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಘೋಷಿಸಿದ್ದಾರೆ.…..ಮುಂದೆ ಓದಿ….
ಬೆಂಗಳೂರಿನಲ್ಲಿ ಮಾತನಾಡಿದ ಅವರು, 50 ಎಂ.ಎಲ್. ಹೆಚ್ಚುವರಿ ಹಾಲು ವಾಪಸ್ಸಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಇತರೆಡೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಹಿಟ್ಟಿಗೆ ಹೆಚ್ಚುವರಿಯಾಗಿ ಪ್ರೋಟಿನ್ ಸೇರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ – ಕೆಎಂಎಫ್ನ ನಂದಿನಿ ವತಿಯಿಂದ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ಇಡ್ಲಿ ಮತ್ತು ದೋಸೆ ಹಿಟ್ಟು ಬಿಡುಗಡೆ ಮಾಡಲಾಗಿದೆ. ನಂದಿನಿ ವೇ ಪ್ರೋಟಿನ್ ಆಧಾರಿತ ಈ ಉತ್ಪನ್ನಗಳನ್ನು ನಂದಿನಿ ಇದೇ ಮೊದಲ ಬಾರಿಗೆ ಉತ್ಪಾದಿಸಿ ಮಾರಾಟ ಮಾಡುತ್ತಿದೆ. ಪ್ರಾಯೋಗಿಕವಾಗಿ ಬೆಂಗಳೂರು ನಗರದಲ್ಲಿ ನಂದಿನಿ ಬ್ರಾಂಡ್ನ ಇಡ್ಲಿ ದೋಸೆ ಹಿಟ್ಟು ಎರಡು ವಿಧದ ಪ್ಯಾಕ್ಗಳಲ್ಲಿ ಲಭ್ಯವಿರುತ್ತದೆ.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…