ಕೆಎಂಎಫ್ಗೆ ಹೆಚ್ಚಿನ ಹಾಲು ಹರಿದು ಬಂದಿದ್ದ ಹಿನ್ನೆಲೆಯಲ್ಲಿ ಪ್ಯಾಕೆಟ್ನಲ್ಲಿ ನೀಡಲಾಗುತ್ತಿದ್ದ ಹಾಲಿನ ಪ್ರಮಾಣವನ್ನು 50 ಎಂಎಲ್ ಹೆಚ್ಚಿಸಿ ದರವನ್ನೂ 2 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಹಾಲಿನ ಜೊತೆ ದರವನ್ನೂ ಹಿಂಪಡೆಯುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಘೋಷಿಸಿದ್ದಾರೆ.…..ಮುಂದೆ ಓದಿ….
ಬೆಂಗಳೂರಿನಲ್ಲಿ ಮಾತನಾಡಿದ ಅವರು, 50 ಎಂ.ಎಲ್. ಹೆಚ್ಚುವರಿ ಹಾಲು ವಾಪಸ್ಸಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಇತರೆಡೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಹಿಟ್ಟಿಗೆ ಹೆಚ್ಚುವರಿಯಾಗಿ ಪ್ರೋಟಿನ್ ಸೇರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ – ಕೆಎಂಎಫ್ನ ನಂದಿನಿ ವತಿಯಿಂದ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ಇಡ್ಲಿ ಮತ್ತು ದೋಸೆ ಹಿಟ್ಟು ಬಿಡುಗಡೆ ಮಾಡಲಾಗಿದೆ. ನಂದಿನಿ ವೇ ಪ್ರೋಟಿನ್ ಆಧಾರಿತ ಈ ಉತ್ಪನ್ನಗಳನ್ನು ನಂದಿನಿ ಇದೇ ಮೊದಲ ಬಾರಿಗೆ ಉತ್ಪಾದಿಸಿ ಮಾರಾಟ ಮಾಡುತ್ತಿದೆ. ಪ್ರಾಯೋಗಿಕವಾಗಿ ಬೆಂಗಳೂರು ನಗರದಲ್ಲಿ ನಂದಿನಿ ಬ್ರಾಂಡ್ನ ಇಡ್ಲಿ ದೋಸೆ ಹಿಟ್ಟು ಎರಡು ವಿಧದ ಪ್ಯಾಕ್ಗಳಲ್ಲಿ ಲಭ್ಯವಿರುತ್ತದೆ.
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…