ಕೆಎಂಎಫ್ಗೆ ಹೆಚ್ಚಿನ ಹಾಲು ಹರಿದು ಬಂದಿದ್ದ ಹಿನ್ನೆಲೆಯಲ್ಲಿ ಪ್ಯಾಕೆಟ್ನಲ್ಲಿ ನೀಡಲಾಗುತ್ತಿದ್ದ ಹಾಲಿನ ಪ್ರಮಾಣವನ್ನು 50 ಎಂಎಲ್ ಹೆಚ್ಚಿಸಿ ದರವನ್ನೂ 2 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಹಾಲಿನ ಜೊತೆ ದರವನ್ನೂ ಹಿಂಪಡೆಯುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಘೋಷಿಸಿದ್ದಾರೆ.…..ಮುಂದೆ ಓದಿ….
ಬೆಂಗಳೂರಿನಲ್ಲಿ ಮಾತನಾಡಿದ ಅವರು, 50 ಎಂ.ಎಲ್. ಹೆಚ್ಚುವರಿ ಹಾಲು ವಾಪಸ್ಸಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಇತರೆಡೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಹಿಟ್ಟಿಗೆ ಹೆಚ್ಚುವರಿಯಾಗಿ ಪ್ರೋಟಿನ್ ಸೇರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ – ಕೆಎಂಎಫ್ನ ನಂದಿನಿ ವತಿಯಿಂದ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ಇಡ್ಲಿ ಮತ್ತು ದೋಸೆ ಹಿಟ್ಟು ಬಿಡುಗಡೆ ಮಾಡಲಾಗಿದೆ. ನಂದಿನಿ ವೇ ಪ್ರೋಟಿನ್ ಆಧಾರಿತ ಈ ಉತ್ಪನ್ನಗಳನ್ನು ನಂದಿನಿ ಇದೇ ಮೊದಲ ಬಾರಿಗೆ ಉತ್ಪಾದಿಸಿ ಮಾರಾಟ ಮಾಡುತ್ತಿದೆ. ಪ್ರಾಯೋಗಿಕವಾಗಿ ಬೆಂಗಳೂರು ನಗರದಲ್ಲಿ ನಂದಿನಿ ಬ್ರಾಂಡ್ನ ಇಡ್ಲಿ ದೋಸೆ ಹಿಟ್ಟು ಎರಡು ವಿಧದ ಪ್ಯಾಕ್ಗಳಲ್ಲಿ ಲಭ್ಯವಿರುತ್ತದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…