ಕೆಎಂಎಫ್ಗೆ ಹೆಚ್ಚಿನ ಹಾಲು ಹರಿದು ಬಂದಿದ್ದ ಹಿನ್ನೆಲೆಯಲ್ಲಿ ಪ್ಯಾಕೆಟ್ನಲ್ಲಿ ನೀಡಲಾಗುತ್ತಿದ್ದ ಹಾಲಿನ ಪ್ರಮಾಣವನ್ನು 50 ಎಂಎಲ್ ಹೆಚ್ಚಿಸಿ ದರವನ್ನೂ 2 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಹಾಲಿನ ಜೊತೆ ದರವನ್ನೂ ಹಿಂಪಡೆಯುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಘೋಷಿಸಿದ್ದಾರೆ.…..ಮುಂದೆ ಓದಿ….
ಬೆಂಗಳೂರಿನಲ್ಲಿ ಮಾತನಾಡಿದ ಅವರು, 50 ಎಂ.ಎಲ್. ಹೆಚ್ಚುವರಿ ಹಾಲು ವಾಪಸ್ಸಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಇತರೆಡೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಹಿಟ್ಟಿಗೆ ಹೆಚ್ಚುವರಿಯಾಗಿ ಪ್ರೋಟಿನ್ ಸೇರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ – ಕೆಎಂಎಫ್ನ ನಂದಿನಿ ವತಿಯಿಂದ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ಇಡ್ಲಿ ಮತ್ತು ದೋಸೆ ಹಿಟ್ಟು ಬಿಡುಗಡೆ ಮಾಡಲಾಗಿದೆ. ನಂದಿನಿ ವೇ ಪ್ರೋಟಿನ್ ಆಧಾರಿತ ಈ ಉತ್ಪನ್ನಗಳನ್ನು ನಂದಿನಿ ಇದೇ ಮೊದಲ ಬಾರಿಗೆ ಉತ್ಪಾದಿಸಿ ಮಾರಾಟ ಮಾಡುತ್ತಿದೆ. ಪ್ರಾಯೋಗಿಕವಾಗಿ ಬೆಂಗಳೂರು ನಗರದಲ್ಲಿ ನಂದಿನಿ ಬ್ರಾಂಡ್ನ ಇಡ್ಲಿ ದೋಸೆ ಹಿಟ್ಟು ಎರಡು ವಿಧದ ಪ್ಯಾಕ್ಗಳಲ್ಲಿ ಲಭ್ಯವಿರುತ್ತದೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…