Advertisement
MIRROR FOCUS

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

Share

ನಂದಿನಿ ಹಾಲು ಮತ್ತು ಹಾಲು ಉತ್ಪನ್ನಗಳು ಸೇವನೆಗೆ ಅಸುರಕ್ಷಿತವೆಂದು ಬಿಂಬಿಸುವ ಹಾಗೂ ಕೆಲವು ನಂದಿನಿ ಉತ್ಪನ್ನಗಳ ವಿರುದ್ಧ ಆಧಾರರಹಿತ ಮತ್ತು ಸುಳ್ಳು ಆರೋಪಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗುತ್ತಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ (KMF) ಸ್ಪಷ್ಟಪಡಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿರುವ ಕೆಎಂಎಫ್, ಬಾಲ್ಯದಿಂದಲೇ ನಂದಿನಿ ಬ್ರಾಂಡ್ ನೊಂದಿಗೆ ಬೆಳೆದ ಕೋಟ್ಯಂತರ ಗ್ರಾಹಕರಲ್ಲಿ ಇಂತಹ ಸುಳ್ಳು ಮಾಹಿತಿ ಅನಗತ್ಯ ಭೀತಿ ಮತ್ತು ಗೊಂದಲವನ್ನು ಉಂಟುಮಾಡುತ್ತಿದೆ ಎಂದು ತಿಳಿಸಿದೆ.

ಗ್ರಾಹಕರು ಯಾವುದೇ ಆಧಾರವಿಲ್ಲದ ವದಂತಿಗಳು ಹಾಗೂ ಸುಳ್ಳು ಆರೋಪಗಳಿಂದ ಗೊಂದಲಕ್ಕೀಡಾಗಬಾರದು ಎಂದು ಮನವಿ ಮಾಡಿರುವ ಸಂಸ್ಥೆಯು, ನಂದಿನಿ ಹಾಲು ಹಾಗೂ ಎಲ್ಲಾ ಹಾಲು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವಾಗಿವೆ ಎಂದು ಭರವಸೆ ನೀಡಿದೆ.

ಕೆಎಂಎಫ್ ತನ್ನ ಎಲ್ಲಾ ಉತ್ಪನ್ನಗಳ ಉತ್ಪಾದನೆ, ಸಂಸ್ಕರಣೆ ಮತ್ತು ವಿತರಣೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ನಿಗದಿಪಡಿಸಿದ ಕಟ್ಟುನಿಟ್ಟಿನ ಮಾನದಂಡಗಳನ್ನು ಸಂಪೂರ್ಣವಾಗಿ ಪಾಲಿಸುತ್ತಿದೆ ಎಂದು ಸ್ಪಷ್ಟಪಡಿಸಿದೆ.

ಇದರೊಂದಿಗೆ, ಗ್ರಾಹಕರು ಅಧಿಕೃತ ಮೂಲಗಳಿಂದ ಮಾತ್ರ ಮಾಹಿತಿ ಪಡೆಯಬೇಕು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಕೆಎಂಎಫ್ ವಿನಂತಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka Milk Federation (KMF) has clarified that Nandini milk and dairy products are completely safe for consumption. The organization urged consumers not to believe false rumors circulating on social media and assured that all products strictly follow FSSAI safety and quality standards.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 hour ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

2 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

12 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago