ಮತ್ತೆ ಹೊಸ ವರ್ಷಕ್ಕೆ ನಂದಿನಿ ಹಾಲು, ಮೊಸರು ದರ ಏರಿಕೆ ಸಾಧ್ಯತೆ | ಸರ್ಕಾರದಿಂದ ಸುಳಿವು

December 15, 2023
12:45 PM

ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು(Milk and Milk Products) ಇನ್ನು ಬಡವರು ಹಾಗೂ ಮಧ್ಯಮ ವರ್ಗದ(Low and Middle class) ಕುಟುಂಬಗಳು(Family) ಕೇವಲ ಕೇಳಬೇಕಷ್ಟೆ…! ದಿನದಿಂದ ದಿನಕ್ಕೆ ಹಾಲಿನ ಬೆಲೆ(milk price hike) ಏರುತ್ತಲೇ ಇದೆ. ಹೊಸ ವರ್ಷಕ್ಕೆ(New year) ನಂದಿನಿ ಹಾಲು, ಮೊಸರು (Nandini Milk, Curd) ದರ ಹೆಚ್ಚಾಗುವ ಸಾಧ್ಯತೆಯಿದೆ. ಈ ಸಂಬಂಧ ಅಧಿವೇಶನದಲ್ಲಿ (Belagavi Session) ಸರ್ಕಾರ ದರ ಏರಿಸುವ ಸುಳಿವು ನೀಡಿದೆ. ಹಾಲಿನ ದರ ಏರಿಕೆ ಪ್ರಸ್ತಾಪ ಪರಿಶೀಲನೆಯಲ್ಲಿದೆ ಎಂದು ಸರ್ಕಾರ (Karnataka Government) ಹೇಳಿದೆ.

ದರ ಹೆಚ್ಚಳ ಕುರಿತು ಮಾಲೂರು ಶಾಸಕ ಕೆ ವೈ ನಂಜೇಗೌಡ ಪ್ರಶ್ನೆಗೆ ಪಶು ಸಂಗೋಪನೆ ಖಾತೆ ಸಚಿವ ಕೆ ವೆಂಕಟೇಶ್ ಉತ್ತರ ನೀಡಿದ್ದಾರೆ. ಇತರೇ ಖಾಸಗಿ ಬ್ರ್ಯಾಂಡ್‌ಗಳ ದರಕ್ಕಿಂತ ನಂದಿನಿ ಬ್ರ್ಯಾಂಡ್‌ಗಳ ದರ 10-12 ರೂ. ಕಡಿಮೆ ಇದೆ. ಹಾಲು ಉತ್ಪಾದಕರು, ಒಕ್ಕೂಟಗಳು ನಷ್ಟದಲ್ಲಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ದರ ಹೆಚ್ಚಿಸುವುದಾಗಿ ಉತ್ತರ ಕೊಟ್ಟಿದ್ದಾರೆ. ಒಂದು ವೇಳೆ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಂಡರೆ ನಾಲ್ಕೇ ತಿಂಗಳ ಒಳಗಡೆ ಮತ್ತೊಮ್ಮೆ ಹಾಲಿನ ದರ ಏರಿಕೆಯಾಗಲಿದೆ. ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಈಗಾಗಲೇ ಚಿಂತನೆ ನಡೆಸಿದೆ. ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.

ಬೆಲೆ ಏರಿಕೆ ಯಾಕೆ? : ಆರ್ಥಿಕ ನಷ್ಟದ (Economic Loss) ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟಗಳಿಂದ ಮನವಿ ಬಂದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ತಯಾರಿ ನಡೆಸುತ್ತಿದೆ. ಕಳೆದ ಬಾರಿ 3 ರೂ. ನೇರವಾಗಿ ರೈತರಿಗೆ ನೀಡಿದ ಹಿನ್ನೆಲೆ ಒಕ್ಕೂಟಗಳಿಗೆ ನಷ್ಟದ ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎನ್ನುತ್ತಿದ್ದಾರೆ ಕೆಎಂಎಫ್ ಅಧಿಕಾರಿಗಳು. ಸದ್ಯ ಜನವರಿಯಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ.

– ಅಂತರ್ಜಾಲ ಮಾಹಿತಿ

The price of Nandini Milk, Curd is likely to increase for the New Year. In this regard, the government has hinted to increase the rate in the session (Belagavi Session). The Government (Karnataka Government) has said that the milk price hike proposal is under review. Animal Husbandry Minister K Venkatesh has answered Malur MLA KY Nanjegowda’s question about price hike.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror