Advertisement
MIRROR FOCUS

ಮತ್ತೆ ಹೊಸ ವರ್ಷಕ್ಕೆ ನಂದಿನಿ ಹಾಲು, ಮೊಸರು ದರ ಏರಿಕೆ ಸಾಧ್ಯತೆ | ಸರ್ಕಾರದಿಂದ ಸುಳಿವು

Share

ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು(Milk and Milk Products) ಇನ್ನು ಬಡವರು ಹಾಗೂ ಮಧ್ಯಮ ವರ್ಗದ(Low and Middle class) ಕುಟುಂಬಗಳು(Family) ಕೇವಲ ಕೇಳಬೇಕಷ್ಟೆ…! ದಿನದಿಂದ ದಿನಕ್ಕೆ ಹಾಲಿನ ಬೆಲೆ(milk price hike) ಏರುತ್ತಲೇ ಇದೆ. ಹೊಸ ವರ್ಷಕ್ಕೆ(New year) ನಂದಿನಿ ಹಾಲು, ಮೊಸರು (Nandini Milk, Curd) ದರ ಹೆಚ್ಚಾಗುವ ಸಾಧ್ಯತೆಯಿದೆ. ಈ ಸಂಬಂಧ ಅಧಿವೇಶನದಲ್ಲಿ (Belagavi Session) ಸರ್ಕಾರ ದರ ಏರಿಸುವ ಸುಳಿವು ನೀಡಿದೆ. ಹಾಲಿನ ದರ ಏರಿಕೆ ಪ್ರಸ್ತಾಪ ಪರಿಶೀಲನೆಯಲ್ಲಿದೆ ಎಂದು ಸರ್ಕಾರ (Karnataka Government) ಹೇಳಿದೆ.

Advertisement
Advertisement

ದರ ಹೆಚ್ಚಳ ಕುರಿತು ಮಾಲೂರು ಶಾಸಕ ಕೆ ವೈ ನಂಜೇಗೌಡ ಪ್ರಶ್ನೆಗೆ ಪಶು ಸಂಗೋಪನೆ ಖಾತೆ ಸಚಿವ ಕೆ ವೆಂಕಟೇಶ್ ಉತ್ತರ ನೀಡಿದ್ದಾರೆ. ಇತರೇ ಖಾಸಗಿ ಬ್ರ್ಯಾಂಡ್‌ಗಳ ದರಕ್ಕಿಂತ ನಂದಿನಿ ಬ್ರ್ಯಾಂಡ್‌ಗಳ ದರ 10-12 ರೂ. ಕಡಿಮೆ ಇದೆ. ಹಾಲು ಉತ್ಪಾದಕರು, ಒಕ್ಕೂಟಗಳು ನಷ್ಟದಲ್ಲಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ದರ ಹೆಚ್ಚಿಸುವುದಾಗಿ ಉತ್ತರ ಕೊಟ್ಟಿದ್ದಾರೆ. ಒಂದು ವೇಳೆ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಂಡರೆ ನಾಲ್ಕೇ ತಿಂಗಳ ಒಳಗಡೆ ಮತ್ತೊಮ್ಮೆ ಹಾಲಿನ ದರ ಏರಿಕೆಯಾಗಲಿದೆ. ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಈಗಾಗಲೇ ಚಿಂತನೆ ನಡೆಸಿದೆ. ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.

Advertisement

ಬೆಲೆ ಏರಿಕೆ ಯಾಕೆ? : ಆರ್ಥಿಕ ನಷ್ಟದ (Economic Loss) ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟಗಳಿಂದ ಮನವಿ ಬಂದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ತಯಾರಿ ನಡೆಸುತ್ತಿದೆ. ಕಳೆದ ಬಾರಿ 3 ರೂ. ನೇರವಾಗಿ ರೈತರಿಗೆ ನೀಡಿದ ಹಿನ್ನೆಲೆ ಒಕ್ಕೂಟಗಳಿಗೆ ನಷ್ಟದ ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎನ್ನುತ್ತಿದ್ದಾರೆ ಕೆಎಂಎಫ್ ಅಧಿಕಾರಿಗಳು. ಸದ್ಯ ಜನವರಿಯಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ.

– ಅಂತರ್ಜಾಲ ಮಾಹಿತಿ

Advertisement

The price of Nandini Milk, Curd is likely to increase for the New Year. In this regard, the government has hinted to increase the rate in the session (Belagavi Session). The Government (Karnataka Government) has said that the milk price hike proposal is under review. Animal Husbandry Minister K Venkatesh has answered Malur MLA KY Nanjegowda’s question about price hike.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ | ಪರಿಸರದ ಮೇಲಾಗುವ ಪರಿಣಾಮಗಳೇನು..?

ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…

10 hours ago

ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ | ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…

ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…

10 hours ago

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ | ಕೈ ತೋಟಗಳಲ್ಲಿ ಸಿಗುವ ಸುಲಭ ಔಷಧಿ

ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…

11 hours ago

ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |

ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy…

11 hours ago

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

ರಬ್ಬರ್‌ ಆಮದು ತಡೆಯಾದರೆ ಟಯರ್‌ ಉದ್ಯಮ ಹಾಗೂ ರಬ್ಬರ್‌ ಬೆಳೆಗಾರರ ರಕ್ಷಣೆ ಸಾಧ್ಯವಿದೆ…

13 hours ago