ರಾಜ್ಯದಲ್ಲಿ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ

December 19, 2022
7:27 PM

ರಾಜ್ಯದಲ್ಲಿ ಒಂದು ತಿಂಗಳು ಗ್ರಾಹಕ ಸ್ನೇಹಿಯಾಗಿ ನಂದಿನಿ ಸಿಹಿ ಉತ್ಸವವನ್ನು ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ಆಚರಣೆ ಮಾಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಹೇಳಿದರು.

ಅವರು ಡಿ.19ರ ಸೋಮವಾರ ಮಂಗಳೂರು ನಗರದ ರಥಬೀದಿಯಲ್ಲಿರುವ ಸುಪ್ರಿಯಾ ಫ್ರಾಂಚೈಸಿಯಲ್ಲಿ ಕರ್ನಾಟಕ ಹಾಲು ಮಹಾಮಂಡಳಿ ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.  ಸಿಹಿ ಉತ್ಸವದ ಅಂಗವಾಗಿ ಪ್ರತಿ ನಂದಿನಿ ಸಿಹಿ ಉತ್ಪನ್ನಗಳ ಮೇಲೆ ಶೇ.20 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಹಾಲು ಒಕ್ಕೂಟದ ರೈತರ ಸೇವೆಯೊಂದಿಗೆ ಗ್ರಾಹಕರ ಸಂತೃಪ್ತಿ, ಕಾರ್ಮಿಕ ಕಲ್ಯಾಣದ ಉದ್ದೇಶ ಹೊಂದಿರುವ ಸಂಸ್ಥೆಯಾಗಿದೆ. ನಂದಿನಿ ಸಿಹಿ ಉತ್ಸವ ಮೂಲಕ ಮತ್ತಷ್ಟು ಗ್ರಾಹಕ ಸ್ನೇಹಿಯಾಗಿದ್ದು, ಈ ಮೂಲಕ ಹೈನುಗಾರರಿಗೂ ಪ್ರೋತ್ಸಾಹ ಸಿಗಲಿದೆ ಎಂದರು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ. ಅಶೋಕ್ ಅವರು ಮಾತನಾಡಿ, ಕ್ರಿಸ್‍ಮಸ್, ಮಕರ ಸಂಕ್ರಾಂತಿ, ಹೊಸ ವರ್ಷಾಚರಣೆಗಳು ಬರುತ್ತಿದ್ದು, ಈ ಸಂಭ್ರಮವನ್ನು ನಂದಿನಿ ಸಿಹಿ ಉತ್ಸವದೊಂದಿಗೆ ಆಚರಿಸೋಣ ಎಂದರು. ನಂದಿನಿ ಹಾಲಿನೊಂದಿಗೆ 59 ಬಗೆಯ ಸಹ ಉತ್ಪನ್ನಗಳಿದ್ದು, ಇವುಗಳಲ್ಲಿ ನಂದಿನಿ ಸಿಹಿ ಉತ್ಪನ್ನಗಳು ರಿಯಾಯಿತಿ ದರದಲ್ಲಿ ಮಾರಾಟ ಮಳಿಗೆಯಲ್ಲಿ ಸಿಗಲಿವೆ ಎಂದರು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸುಭದ್ರ ರಾವ್, ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಡಾ. ರವಿರಾಜ್ ಉಡುಪ, ಉಪವ್ಯವಸ್ಥಾಪಕಿ ಜಾನೆಟ್, ಸಹಾಯಕ ವ್ಯವಸ್ಥಾಪಕ ಸಚಿನ್, ಸಿಬ್ಬಂದಿ ಅಭಿಷೇಕ್ ಮತ್ತು ರಮೇಶ್ ಬೂದಿಗಟ್ಟಿ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror