ರಾಜ್ಯದಲ್ಲಿ ಒಂದು ತಿಂಗಳು ಗ್ರಾಹಕ ಸ್ನೇಹಿಯಾಗಿ ನಂದಿನಿ ಸಿಹಿ ಉತ್ಸವವನ್ನು ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ಆಚರಣೆ ಮಾಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಹೇಳಿದರು.
ಅವರು ಡಿ.19ರ ಸೋಮವಾರ ಮಂಗಳೂರು ನಗರದ ರಥಬೀದಿಯಲ್ಲಿರುವ ಸುಪ್ರಿಯಾ ಫ್ರಾಂಚೈಸಿಯಲ್ಲಿ ಕರ್ನಾಟಕ ಹಾಲು ಮಹಾಮಂಡಳಿ ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಸಿಹಿ ಉತ್ಸವದ ಅಂಗವಾಗಿ ಪ್ರತಿ ನಂದಿನಿ ಸಿಹಿ ಉತ್ಪನ್ನಗಳ ಮೇಲೆ ಶೇ.20 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಹಾಲು ಒಕ್ಕೂಟದ ರೈತರ ಸೇವೆಯೊಂದಿಗೆ ಗ್ರಾಹಕರ ಸಂತೃಪ್ತಿ, ಕಾರ್ಮಿಕ ಕಲ್ಯಾಣದ ಉದ್ದೇಶ ಹೊಂದಿರುವ ಸಂಸ್ಥೆಯಾಗಿದೆ. ನಂದಿನಿ ಸಿಹಿ ಉತ್ಸವ ಮೂಲಕ ಮತ್ತಷ್ಟು ಗ್ರಾಹಕ ಸ್ನೇಹಿಯಾಗಿದ್ದು, ಈ ಮೂಲಕ ಹೈನುಗಾರರಿಗೂ ಪ್ರೋತ್ಸಾಹ ಸಿಗಲಿದೆ ಎಂದರು.
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ. ಅಶೋಕ್ ಅವರು ಮಾತನಾಡಿ, ಕ್ರಿಸ್ಮಸ್, ಮಕರ ಸಂಕ್ರಾಂತಿ, ಹೊಸ ವರ್ಷಾಚರಣೆಗಳು ಬರುತ್ತಿದ್ದು, ಈ ಸಂಭ್ರಮವನ್ನು ನಂದಿನಿ ಸಿಹಿ ಉತ್ಸವದೊಂದಿಗೆ ಆಚರಿಸೋಣ ಎಂದರು. ನಂದಿನಿ ಹಾಲಿನೊಂದಿಗೆ 59 ಬಗೆಯ ಸಹ ಉತ್ಪನ್ನಗಳಿದ್ದು, ಇವುಗಳಲ್ಲಿ ನಂದಿನಿ ಸಿಹಿ ಉತ್ಪನ್ನಗಳು ರಿಯಾಯಿತಿ ದರದಲ್ಲಿ ಮಾರಾಟ ಮಳಿಗೆಯಲ್ಲಿ ಸಿಗಲಿವೆ ಎಂದರು.
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸುಭದ್ರ ರಾವ್, ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಡಾ. ರವಿರಾಜ್ ಉಡುಪ, ಉಪವ್ಯವಸ್ಥಾಪಕಿ ಜಾನೆಟ್, ಸಹಾಯಕ ವ್ಯವಸ್ಥಾಪಕ ಸಚಿನ್, ಸಿಬ್ಬಂದಿ ಅಭಿಷೇಕ್ ಮತ್ತು ರಮೇಶ್ ಬೂದಿಗಟ್ಟಿ ಇದ್ದರು.
ನಮ್ಮ ಊರಿನಲ್ಲೂ ನಾವು ಮಾಡಬಹುದಾದ ಸೇವಾ ಕಾರ್ಯ ಇದು. ಊರಿನ ಆಸು ಪಾಸಿನಲ್ಲಿರುವ…
ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father's Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು…
ಪ್ರತಿಯೊಬ್ಬ ಮನುಷ್ಯನೂ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಶೀಲನಾಗಬೇಕು. ಚಿನ್ನವಾದರೂ ಅದನ್ನು ಸಂಸ್ಕರಿಸಿದಾಗ ಮಾತ್ರ…
ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದ ಉತ್ತರ ಭಾಗ ತಲುಪಿದ್ದು,…
ಗ್ರಾಮೀಣ ಮತ್ತು ಸಣ್ಣ ನಗರ ಪ್ರದೇಶಗಳಲ್ಲಿ ಹಲಸಿನ ಮೌಲ್ಯ ವರ್ಧನೆ ಘಟಕಗಳು ಕಾರ್ಯನಿರ್ವಹಿಸುತ್ತಿವೆ.…
ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…