Advertisement
ಸುದ್ದಿಗಳು

ರಾಜ್ಯದಲ್ಲಿ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ

Share

ರಾಜ್ಯದಲ್ಲಿ ಒಂದು ತಿಂಗಳು ಗ್ರಾಹಕ ಸ್ನೇಹಿಯಾಗಿ ನಂದಿನಿ ಸಿಹಿ ಉತ್ಸವವನ್ನು ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ಆಚರಣೆ ಮಾಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಹೇಳಿದರು.

ಅವರು ಡಿ.19ರ ಸೋಮವಾರ ಮಂಗಳೂರು ನಗರದ ರಥಬೀದಿಯಲ್ಲಿರುವ ಸುಪ್ರಿಯಾ ಫ್ರಾಂಚೈಸಿಯಲ್ಲಿ ಕರ್ನಾಟಕ ಹಾಲು ಮಹಾಮಂಡಳಿ ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.  ಸಿಹಿ ಉತ್ಸವದ ಅಂಗವಾಗಿ ಪ್ರತಿ ನಂದಿನಿ ಸಿಹಿ ಉತ್ಪನ್ನಗಳ ಮೇಲೆ ಶೇ.20 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಹಾಲು ಒಕ್ಕೂಟದ ರೈತರ ಸೇವೆಯೊಂದಿಗೆ ಗ್ರಾಹಕರ ಸಂತೃಪ್ತಿ, ಕಾರ್ಮಿಕ ಕಲ್ಯಾಣದ ಉದ್ದೇಶ ಹೊಂದಿರುವ ಸಂಸ್ಥೆಯಾಗಿದೆ. ನಂದಿನಿ ಸಿಹಿ ಉತ್ಸವ ಮೂಲಕ ಮತ್ತಷ್ಟು ಗ್ರಾಹಕ ಸ್ನೇಹಿಯಾಗಿದ್ದು, ಈ ಮೂಲಕ ಹೈನುಗಾರರಿಗೂ ಪ್ರೋತ್ಸಾಹ ಸಿಗಲಿದೆ ಎಂದರು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ. ಅಶೋಕ್ ಅವರು ಮಾತನಾಡಿ, ಕ್ರಿಸ್‍ಮಸ್, ಮಕರ ಸಂಕ್ರಾಂತಿ, ಹೊಸ ವರ್ಷಾಚರಣೆಗಳು ಬರುತ್ತಿದ್ದು, ಈ ಸಂಭ್ರಮವನ್ನು ನಂದಿನಿ ಸಿಹಿ ಉತ್ಸವದೊಂದಿಗೆ ಆಚರಿಸೋಣ ಎಂದರು. ನಂದಿನಿ ಹಾಲಿನೊಂದಿಗೆ 59 ಬಗೆಯ ಸಹ ಉತ್ಪನ್ನಗಳಿದ್ದು, ಇವುಗಳಲ್ಲಿ ನಂದಿನಿ ಸಿಹಿ ಉತ್ಪನ್ನಗಳು ರಿಯಾಯಿತಿ ದರದಲ್ಲಿ ಮಾರಾಟ ಮಳಿಗೆಯಲ್ಲಿ ಸಿಗಲಿವೆ ಎಂದರು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸುಭದ್ರ ರಾವ್, ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಡಾ. ರವಿರಾಜ್ ಉಡುಪ, ಉಪವ್ಯವಸ್ಥಾಪಕಿ ಜಾನೆಟ್, ಸಹಾಯಕ ವ್ಯವಸ್ಥಾಪಕ ಸಚಿನ್, ಸಿಬ್ಬಂದಿ ಅಭಿಷೇಕ್ ಮತ್ತು ರಮೇಶ್ ಬೂದಿಗಟ್ಟಿ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

21 minutes ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

1 hour ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

2 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

2 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

2 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

3 hours ago