ಹೊಸಪೇಟೆ ತಾಲೂಕಿನಲ್ಲಿ ಭತ್ತದ ಬೆಳೆಗಳಿಗೆ ಡ್ರೋನ್ ಮೂಲಕ ನ್ಯಾನೋ ಯೂರಿಯ ಮತ್ತು ನ್ಯಾನೋ ಡಿಎಪಿ ರಸಗೊಬ್ಬರಗಳ ಸಿಂಪಡಣೆ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ವಿಜಯನಗರ ಜಿಲ್ಲೆಯಲ್ಲಿನ ಬಹುತೇಕ ಮಣ್ಣಿನಲ್ಲಿ ಸಾರಜನಕ ಕೊರತೆ ಹೆಚ್ಚಾಗಿದ್ದು, ನ್ಯಾನೋ ಯೂರಿಯಾ ಪ್ಲಸ್ ಉತ್ತಮ ರಸಗೊಬ್ಬರವಾಗಿದೆ. ಇದು ಗಿಡಕ್ಕೆ ಬೇಕಾಗಿರುವ ಸಾರಜನಕ ಮತ್ತು ರಂಜಕವನ್ನು ಸರಿಯಾದ ಪ್ರಮಾಣದಲ್ಲಿ ಒದಗಿಸುವುದರಿಂದ ಗಿಡದ ಬೆಳೆವಣಿಗೆ ಹಾಗೂ ಬೇರಿನ ಬೆಳವಣಿಗೆ ಉತ್ತಮವಾಗಿರುತ್ತದೆ. ಇವುಗಳನ್ನು ಬಳಸುವುದರಿಂದ ಬೆಳೆಗಳ ಉತ್ಪಾದಕತೆ ಹೆಚ್ಚಾಗಿ, ವೆಚ್ಚ ಕಡಿಮೆಯಾಗುತ್ತದೆ. ಹೀಗಾಗಿ ರೈತರ ಆದಾಯ ಹೆಚ್ಚಾಗುತ್ತದೆ ಎಂದು ಹೇಳಿದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…