Advertisement
MIRROR FOCUS

ಜೇನು ಸಿಹಿ ಮಾತ್ರವಲ್ಲ- ಆರೋಗ್ಯ, ಸ್ವ-ಉದ್ಯೋಗ ಮತ್ತು ಸ್ವಾವಲಂಬನೆಯ ಉದಾಹರಣೆ

Share

ಈಚೆಗೆ’ವಿಶ್ವ ಜೇನುನೊಣ ದಿನ’ ಎಂದು ಆಚರಿಸಲಾಯಿತು, ಈ ದಿನ ಜೇನುತುಪ್ಪವು ಕೇವಲ ಸಿಹಿ ಮಾತ್ರವಲ್ಲ, ಆರೋಗ್ಯ, ಸ್ವ-ಉದ್ಯೋಗ ಮತ್ತು ಸ್ವಾವಲಂಬನೆಯ ಉದಾಹರಣೆಯಾಗಿದೆ. ರೈತರು, ಮಹಿಳಾ ಉದ್ಯಮಿಗಳಿಂದ ಜೇನುತುಪ್ಪವನ್ನು ಖರೀದಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಆಕಾಶವಾಣಿಯ ಜನಪ್ರಿಯ ಕಾರ್ಯಕ್ರಮ ’ಮನ್ ಕಿ ಬಾತ್’ನಲ್ಲಿ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.

ಸ್ವಚ್ಛ ಭಾರತ ಅಭಿಯಾನ ಈಗ ಕೇವಲ ನಗರಗಳ ಮಟ್ಟಕ್ಕೆ ಸೀಮಿತವಿಲ್ಲ, ಇದು ಪರ್ವತ ಶಿಖರಗಳವರೆಗೆ ವಿಸ್ತರಿಸಿದೆ. ಕಾಗದದ ತ್ಯಾಜ್ಯ ನಿರ್ವಹಣೆ ಬಗ್ಗೆಯೂ ಮಾತನಾಡಿದ ಪ್ರಧಾನಿ, ಇದು ಇಂದಿನ ಮುಖ್ಯ ಸಮಸ್ಯೆಯಾಗಿದೆ ಎಂದು ಹೇಳಿದರು. ದೇಶದ ತ್ಯಾಜ್ಯ ವಿಲೇವಾರಿ ಸ್ಥಳಗಳಲ್ಲಿ ಬಹುಪಾಲು ಕಾಗದದ ತ್ಯಾಜ್ಯವಿದೆ. ಒಂದು ಟನ್ ಕಾಗದವನ್ನು ಮರುಬಳಕೆ ಮಾಡುವುದರಿಂದ 17 ಮರಗಳು ಮತ್ತು ಸಾವಿರಾರು ಲೀಟರ್ ನೀರನ್ನು ಉಳಿಸಬಹುದು ಎಂದು ತಿಳಿಸಿದ್ದಾರೆ.

’ಆಪರೇಷನ್ ಸಿಂಧೂರ್’ ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. ’ಆಪರೇಷನ್ ಸಿಂಧೂರ್’ ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ಮತ್ತು ಉತ್ಸಾಹ ತುಂಬಿದೆ ಎಂದು ತಿಳಿಸಿದ್ದಾರೆ. ’ಆಪರೇಷನ್ ಸಿಂಧೂರ್’ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಇದು ನಮ್ಮ ದೃಢನಿಶ್ಚಯ, ಧೈರ್ಯ ಮತ್ತು ಬದಲಾಗುತ್ತಿರುವ ಭಾರತದ ಚಿತ್ರಣವಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ನಮ್ಮ  ಯೋಧರು ಪಾಕ್ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದ್ದು  ಅವರ ಅದಮ್ಯ ಸಾಹಸವಾಗಿತ್ತು. ಅದರಲ್ಲಿ ಭಾರತದಲ್ಲಿ ತಯಾರಿಸಿದ ಶಸ್ತ್ರಾಸ್ತ್ರಗಳು, ಉಪಕರಣಗಳು ಮತ್ತು ತಂತ್ರಜ್ಞಾನದ ಶಕ್ತಿಯೂ ಸೇರಿತ್ತು. ಈ ಅಭಿಯಾನದ ನಂತರ, ದೇಶಾದ್ಯಂತ ‘ವೋಕಲ್ ಫಾರ್ ಲೋಕಲ್ ಕುರಿತು ಹೊಸ ಆಶಾಕಿರಣ ಮೂಡಿಸಿದೆ ಎಂದು ಹೇಳಿದ್ದಾರೆ.

ಈಗ ಕೆಲವು ಶಾಲೆಗಳಲ್ಲಿ ಶುಗರ್ ಬೋರ್ಡ್ ಹಾಕಲಾಗುತ್ತಿದೆ. ಇದರ ಉದ್ದೇಶ ಮಕ್ಕಳಿಗೆ ಸಕ್ಕರೆ ಸೇವನೆ ಬಗ್ಗೆ ಜಾಗೃತಿ ಮೂಡಿಸುವುದು. ಬಾಲ್ಯದಿಂದಲೇ ಮಕ್ಕಳು ಆರೋಗ್ಯಕರ ಜೀವನಶೈಲಿಯ ಅಭ್ಯಾಸ ಮಾಡಿಕೊಳ್ಳುವಂತೆ ಪ್ರಧಾನಿ ಕರೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಯೋಗದಿನ’ಕ್ಕೆ ಕೆಲವೇ ದಿನ ಬಾಕಿಯಿದ್ದು ಯೋಗಾಭ್ಯಾಸದಿಂದ  ದೂರವಿದ್ದರೆ ಕೂಡಲೇ ಯೋಗಾಭ್ಯಾಸ ಆರಂಭಿಸಿ ಎಂದು ಕರೆ ನೀಡಿದ್ದಾರೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

12 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

12 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago