ರಾಷ್ಟ್ರೀಯ ಕೃಷಿ ಶಿಕ್ಷಣ ದಿನ | ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳಿಂದ ಆಚರಣೆ

December 4, 2021
9:00 PM

ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನು ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ  ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಆಚರಿಸಿದರು.

ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿಗಳು ಹಾಗೂ ಮೊದಲ ಕೇಂದ್ರ ಕೃಷಿಮಂತ್ರಿಗಳಾದ ಡಾ.ರಾಜೇಂದ್ರ ಪ್ರಸಾದ್ ಅವರ ಜನ್ಮದಿನವಾದ ಡಿಸೆಂಬರ್ 3 ರಂದು ದೇಶದಾದ್ಯಂತ ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ.ಈ ನಿಟ್ಟಿನಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಕೃಷಿ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಗೇರು ಕೃಷಿಯ ಬಗ್ಗೆ ವಿವರ ಹಾಗೂ ಉನ್ನತಾಧ್ಯಯನದಲ್ಲಿ ಕೃಷಿ ಶಿಕ್ಷಣದ ಬಗ್ಗೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಕೃಷಿ ವಿಜ್ಞಾನಿ ಡಾ.ಈರದಾಸಪ್ಪ ರವರಿಂದ ಮಾಹಿತಿ ಪಡೆದರು.”ಕೃಷಿ ಶಿಕ್ಷಣವೂ ಬೇರೆ ಉದ್ಯೋಗಗಳಷ್ಟೇ ಪ್ರೌಢಿಮೆಯನ್ನು ಹೊಂದಿದ್ದು ಆರ್ಥಿಕವಾಗಿಯೂ ಲಾಭದಾಯಕವಾದ ಕ್ಷೇತ್ರ ಇದಾಗಿದೆ.”ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎನ್.ಆರ್.ಸಿ.ಸಿ. ಕೃಷಿ ವಿಜ್ಞಾನಿಗಳಾದ ಡಾ.ದಿನಕರ ಅಡಿಗ,ಡಾ.ರವಿಪ್ರಸಾದ್,ಡಾ.ಅಶ್ವಧಿ,ಸಿಬ್ಬಂದಿ ವರ್ಗ,ನರೇಂದ್ರ ಪ.ಪೂ. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಕಾರ್ತಿಕ್ ಕುಮಾರ್ ಎನ್ ಹಾಗೂ ಸಂಸ್ಕøತ ಉಪನ್ಯಾಸಕರಾದ ವಿಘ್ನೇಶ್ ಭಟ್ ಪಡ್ನೂರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror