ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನು ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಆಚರಿಸಿದರು.
ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿಗಳು ಹಾಗೂ ಮೊದಲ ಕೇಂದ್ರ ಕೃಷಿಮಂತ್ರಿಗಳಾದ ಡಾ.ರಾಜೇಂದ್ರ ಪ್ರಸಾದ್ ಅವರ ಜನ್ಮದಿನವಾದ ಡಿಸೆಂಬರ್ 3 ರಂದು ದೇಶದಾದ್ಯಂತ ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ.ಈ ನಿಟ್ಟಿನಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಕೃಷಿ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಗೇರು ಕೃಷಿಯ ಬಗ್ಗೆ ವಿವರ ಹಾಗೂ ಉನ್ನತಾಧ್ಯಯನದಲ್ಲಿ ಕೃಷಿ ಶಿಕ್ಷಣದ ಬಗ್ಗೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಕೃಷಿ ವಿಜ್ಞಾನಿ ಡಾ.ಈರದಾಸಪ್ಪ ರವರಿಂದ ಮಾಹಿತಿ ಪಡೆದರು.”ಕೃಷಿ ಶಿಕ್ಷಣವೂ ಬೇರೆ ಉದ್ಯೋಗಗಳಷ್ಟೇ ಪ್ರೌಢಿಮೆಯನ್ನು ಹೊಂದಿದ್ದು ಆರ್ಥಿಕವಾಗಿಯೂ ಲಾಭದಾಯಕವಾದ ಕ್ಷೇತ್ರ ಇದಾಗಿದೆ.”ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎನ್.ಆರ್.ಸಿ.ಸಿ. ಕೃಷಿ ವಿಜ್ಞಾನಿಗಳಾದ ಡಾ.ದಿನಕರ ಅಡಿಗ,ಡಾ.ರವಿಪ್ರಸಾದ್,ಡಾ.ಅಶ್ವಧಿ,ಸಿಬ್ಬಂದಿ ವರ್ಗ,ನರೇಂದ್ರ ಪ.ಪೂ. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಕಾರ್ತಿಕ್ ಕುಮಾರ್ ಎನ್ ಹಾಗೂ ಸಂಸ್ಕøತ ಉಪನ್ಯಾಸಕರಾದ ವಿಘ್ನೇಶ್ ಭಟ್ ಪಡ್ನೂರು ಉಪಸ್ಥಿತರಿದ್ದರು.ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…