ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನು ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಆಚರಿಸಿದರು.
ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿಗಳು ಹಾಗೂ ಮೊದಲ ಕೇಂದ್ರ ಕೃಷಿಮಂತ್ರಿಗಳಾದ ಡಾ.ರಾಜೇಂದ್ರ ಪ್ರಸಾದ್ ಅವರ ಜನ್ಮದಿನವಾದ ಡಿಸೆಂಬರ್ 3 ರಂದು ದೇಶದಾದ್ಯಂತ ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ.ಈ ನಿಟ್ಟಿನಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಕೃಷಿ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಗೇರು ಕೃಷಿಯ ಬಗ್ಗೆ ವಿವರ ಹಾಗೂ ಉನ್ನತಾಧ್ಯಯನದಲ್ಲಿ ಕೃಷಿ ಶಿಕ್ಷಣದ ಬಗ್ಗೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಕೃಷಿ ವಿಜ್ಞಾನಿ ಡಾ.ಈರದಾಸಪ್ಪ ರವರಿಂದ ಮಾಹಿತಿ ಪಡೆದರು.”ಕೃಷಿ ಶಿಕ್ಷಣವೂ ಬೇರೆ ಉದ್ಯೋಗಗಳಷ್ಟೇ ಪ್ರೌಢಿಮೆಯನ್ನು ಹೊಂದಿದ್ದು ಆರ್ಥಿಕವಾಗಿಯೂ ಲಾಭದಾಯಕವಾದ ಕ್ಷೇತ್ರ ಇದಾಗಿದೆ.”ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎನ್.ಆರ್.ಸಿ.ಸಿ. ಕೃಷಿ ವಿಜ್ಞಾನಿಗಳಾದ ಡಾ.ದಿನಕರ ಅಡಿಗ,ಡಾ.ರವಿಪ್ರಸಾದ್,ಡಾ.ಅಶ್ವಧಿ,ಸಿಬ್ಬಂದಿ ವರ್ಗ,ನರೇಂದ್ರ ಪ.ಪೂ. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಕಾರ್ತಿಕ್ ಕುಮಾರ್ ಎನ್ ಹಾಗೂ ಸಂಸ್ಕøತ ಉಪನ್ಯಾಸಕರಾದ ವಿಘ್ನೇಶ್ ಭಟ್ ಪಡ್ನೂರು ಉಪಸ್ಥಿತರಿದ್ದರು.ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…