ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನು ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಆಚರಿಸಿದರು.
ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿಗಳು ಹಾಗೂ ಮೊದಲ ಕೇಂದ್ರ ಕೃಷಿಮಂತ್ರಿಗಳಾದ ಡಾ.ರಾಜೇಂದ್ರ ಪ್ರಸಾದ್ ಅವರ ಜನ್ಮದಿನವಾದ ಡಿಸೆಂಬರ್ 3 ರಂದು ದೇಶದಾದ್ಯಂತ ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ.ಈ ನಿಟ್ಟಿನಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಕೃಷಿ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಗೇರು ಕೃಷಿಯ ಬಗ್ಗೆ ವಿವರ ಹಾಗೂ ಉನ್ನತಾಧ್ಯಯನದಲ್ಲಿ ಕೃಷಿ ಶಿಕ್ಷಣದ ಬಗ್ಗೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಕೃಷಿ ವಿಜ್ಞಾನಿ ಡಾ.ಈರದಾಸಪ್ಪ ರವರಿಂದ ಮಾಹಿತಿ ಪಡೆದರು.”ಕೃಷಿ ಶಿಕ್ಷಣವೂ ಬೇರೆ ಉದ್ಯೋಗಗಳಷ್ಟೇ ಪ್ರೌಢಿಮೆಯನ್ನು ಹೊಂದಿದ್ದು ಆರ್ಥಿಕವಾಗಿಯೂ ಲಾಭದಾಯಕವಾದ ಕ್ಷೇತ್ರ ಇದಾಗಿದೆ.”ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎನ್.ಆರ್.ಸಿ.ಸಿ. ಕೃಷಿ ವಿಜ್ಞಾನಿಗಳಾದ ಡಾ.ದಿನಕರ ಅಡಿಗ,ಡಾ.ರವಿಪ್ರಸಾದ್,ಡಾ.ಅಶ್ವಧಿ,ಸಿಬ್ಬಂದಿ ವರ್ಗ,ನರೇಂದ್ರ ಪ.ಪೂ. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಕಾರ್ತಿಕ್ ಕುಮಾರ್ ಎನ್ ಹಾಗೂ ಸಂಸ್ಕøತ ಉಪನ್ಯಾಸಕರಾದ ವಿಘ್ನೇಶ್ ಭಟ್ ಪಡ್ನೂರು ಉಪಸ್ಥಿತರಿದ್ದರು.ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…