ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನು ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಆಚರಿಸಿದರು.
ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿಗಳು ಹಾಗೂ ಮೊದಲ ಕೇಂದ್ರ ಕೃಷಿಮಂತ್ರಿಗಳಾದ ಡಾ.ರಾಜೇಂದ್ರ ಪ್ರಸಾದ್ ಅವರ ಜನ್ಮದಿನವಾದ ಡಿಸೆಂಬರ್ 3 ರಂದು ದೇಶದಾದ್ಯಂತ ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ.ಈ ನಿಟ್ಟಿನಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಕೃಷಿ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಗೇರು ಕೃಷಿಯ ಬಗ್ಗೆ ವಿವರ ಹಾಗೂ ಉನ್ನತಾಧ್ಯಯನದಲ್ಲಿ ಕೃಷಿ ಶಿಕ್ಷಣದ ಬಗ್ಗೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಕೃಷಿ ವಿಜ್ಞಾನಿ ಡಾ.ಈರದಾಸಪ್ಪ ರವರಿಂದ ಮಾಹಿತಿ ಪಡೆದರು.”ಕೃಷಿ ಶಿಕ್ಷಣವೂ ಬೇರೆ ಉದ್ಯೋಗಗಳಷ್ಟೇ ಪ್ರೌಢಿಮೆಯನ್ನು ಹೊಂದಿದ್ದು ಆರ್ಥಿಕವಾಗಿಯೂ ಲಾಭದಾಯಕವಾದ ಕ್ಷೇತ್ರ ಇದಾಗಿದೆ.”ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎನ್.ಆರ್.ಸಿ.ಸಿ. ಕೃಷಿ ವಿಜ್ಞಾನಿಗಳಾದ ಡಾ.ದಿನಕರ ಅಡಿಗ,ಡಾ.ರವಿಪ್ರಸಾದ್,ಡಾ.ಅಶ್ವಧಿ,ಸಿಬ್ಬಂದಿ ವರ್ಗ,ನರೇಂದ್ರ ಪ.ಪೂ. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಕಾರ್ತಿಕ್ ಕುಮಾರ್ ಎನ್ ಹಾಗೂ ಸಂಸ್ಕøತ ಉಪನ್ಯಾಸಕರಾದ ವಿಘ್ನೇಶ್ ಭಟ್ ಪಡ್ನೂರು ಉಪಸ್ಥಿತರಿದ್ದರು.ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…