ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನು ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಆಚರಿಸಿದರು.
ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿಗಳು ಹಾಗೂ ಮೊದಲ ಕೇಂದ್ರ ಕೃಷಿಮಂತ್ರಿಗಳಾದ ಡಾ.ರಾಜೇಂದ್ರ ಪ್ರಸಾದ್ ಅವರ ಜನ್ಮದಿನವಾದ ಡಿಸೆಂಬರ್ 3 ರಂದು ದೇಶದಾದ್ಯಂತ ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ.ಈ ನಿಟ್ಟಿನಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಕೃಷಿ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಗೇರು ಕೃಷಿಯ ಬಗ್ಗೆ ವಿವರ ಹಾಗೂ ಉನ್ನತಾಧ್ಯಯನದಲ್ಲಿ ಕೃಷಿ ಶಿಕ್ಷಣದ ಬಗ್ಗೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಕೃಷಿ ವಿಜ್ಞಾನಿ ಡಾ.ಈರದಾಸಪ್ಪ ರವರಿಂದ ಮಾಹಿತಿ ಪಡೆದರು.”ಕೃಷಿ ಶಿಕ್ಷಣವೂ ಬೇರೆ ಉದ್ಯೋಗಗಳಷ್ಟೇ ಪ್ರೌಢಿಮೆಯನ್ನು ಹೊಂದಿದ್ದು ಆರ್ಥಿಕವಾಗಿಯೂ ಲಾಭದಾಯಕವಾದ ಕ್ಷೇತ್ರ ಇದಾಗಿದೆ.”ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎನ್.ಆರ್.ಸಿ.ಸಿ. ಕೃಷಿ ವಿಜ್ಞಾನಿಗಳಾದ ಡಾ.ದಿನಕರ ಅಡಿಗ,ಡಾ.ರವಿಪ್ರಸಾದ್,ಡಾ.ಅಶ್ವಧಿ,ಸಿಬ್ಬಂದಿ ವರ್ಗ,ನರೇಂದ್ರ ಪ.ಪೂ. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಕಾರ್ತಿಕ್ ಕುಮಾರ್ ಎನ್ ಹಾಗೂ ಸಂಸ್ಕøತ ಉಪನ್ಯಾಸಕರಾದ ವಿಘ್ನೇಶ್ ಭಟ್ ಪಡ್ನೂರು ಉಪಸ್ಥಿತರಿದ್ದರು.ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…