Advertisement
ಕೃಷಿ

ಕೃಷಿ ಕಾನೂನುನುಗಳು ಮತ್ತೆ ಮುಂದುವರಿಯಬಹುದು | ಕೃಷಿ ಸಚಿವ ನರೇಂದ್ರ ತೋಮರ್ |

Share

ರೈತರ ನಿರಂತರ ಪ್ರತಿಭಟನೆ ರಾಷ್ಟ್ರವ್ಯಾಪಿ ನಡೆದ ನಂತರ ಕಳೆದ ತಿಂಗಳು ರದ್ದುಪಡಿಸಿದ ಮೂರು ಕೃಷಿ ಕಾನೂನುಗಳನ್ನು ಸರ್ಕಾರವು ಮತ್ತೆ ಜಾರಿಗೆ ತರಬಹುದು ಅಥವಾ ಮರು ಪರಿಚಯಿಸಬಹುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಮೂರು ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಮೂಲಕ ಸರ್ಕಾರವು ಒಂದು ಹೆಜ್ಜೆ ಹಿಂದಕ್ಕೆ ಹೋಗಿರುವುದು  ನಿಜ, ಆದರೆ ಅದು ಮತ್ತೆ ಎರಡು ಹೆಜ್ಜೆ ಮುಂದಕ್ಕೆ ಮುಂದುವರಿಯಬಹುದು ಎಂದು ಹೇಳಿದರು.

ನಾವು ಕೃಷಿ ತಿದ್ದುಪಡಿ ಕಾನೂನುಗಳನ್ನು ತಂದಿದ್ದೇವೆ. ಆದರೆ ಕೆಲವರು ಈ ಕಾನೂನುಗಳನ್ನು ಇಷ್ಟಪಡಲಿಲ್ಲ. 7೦ ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೃಷಿ ಕ್ಷೇತ್ರವೂ ದೊಡ್ಡ ಸುಧಾರಣೆಯಾಗಿದೆ. ರೈತರು ಭಾರತದ ಬೆನ್ನಲುಬು, ಬೆನ್ನೆಲುಬು ಗಟ್ಟಿಯಾಗಿದ್ದರೆ ದೇಶವೂ ಸದೃಢವಾಗುತ್ತದೆ ಎಂದರು.

ಇದಕ್ಕೆ ಪ್ರತಿಯಾಗಿ ಉತ್ತರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೃಷಿ ಸಚಿವರು ಸಾರ್ವಜನಿಕವಾಗಿ ವ್ಯತಿರಿಕ್ತವಾಗಿ ಮತ್ತೆ ರೈತರನ್ನು, ರೈತ ಹೋರಾಟವನ್ನು ಅವಮಾನಿಸಿದ್ದಾರೆ. ಸರಕಾರ ಮತ್ತೊಮ್ಮೆ ರೈತ ವಿರೋಧಿ ಕ್ರಮಕ್ಕೆ ಮುಂದಾದರೆ ಅನ್ನದಾತರು ಮತ್ತೆ ಸತ್ಯಾಗ್ರಹಕ್ಕೆ ಮುಂದಾಗುತ್ತಾರೆ . ಮಾತ್ರವಲ್ಲ ಸರಕಾರದ ಅಹಂಕಾರವನ್ನು ಒಮ್ಮೆ ಹತ್ತಿಕ್ಕಿ ಸತ್ಯಾಗ್ರಹ ಮಾಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಟ್ವೀಟ್ ಮೂಲಕ ಉತ್ತರಿಸಿದ್ದಾರೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

21 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

21 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

23 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

23 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago