ರೈತರ ನಿರಂತರ ಪ್ರತಿಭಟನೆ ರಾಷ್ಟ್ರವ್ಯಾಪಿ ನಡೆದ ನಂತರ ಕಳೆದ ತಿಂಗಳು ರದ್ದುಪಡಿಸಿದ ಮೂರು ಕೃಷಿ ಕಾನೂನುಗಳನ್ನು ಸರ್ಕಾರವು ಮತ್ತೆ ಜಾರಿಗೆ ತರಬಹುದು ಅಥವಾ ಮರು ಪರಿಚಯಿಸಬಹುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ನಾವು ಕೃಷಿ ತಿದ್ದುಪಡಿ ಕಾನೂನುಗಳನ್ನು ತಂದಿದ್ದೇವೆ. ಆದರೆ ಕೆಲವರು ಈ ಕಾನೂನುಗಳನ್ನು ಇಷ್ಟಪಡಲಿಲ್ಲ. 7೦ ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೃಷಿ ಕ್ಷೇತ್ರವೂ ದೊಡ್ಡ ಸುಧಾರಣೆಯಾಗಿದೆ. ರೈತರು ಭಾರತದ ಬೆನ್ನಲುಬು, ಬೆನ್ನೆಲುಬು ಗಟ್ಟಿಯಾಗಿದ್ದರೆ ದೇಶವೂ ಸದೃಢವಾಗುತ್ತದೆ ಎಂದರು.
ಇದಕ್ಕೆ ಪ್ರತಿಯಾಗಿ ಉತ್ತರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೃಷಿ ಸಚಿವರು ಸಾರ್ವಜನಿಕವಾಗಿ ವ್ಯತಿರಿಕ್ತವಾಗಿ ಮತ್ತೆ ರೈತರನ್ನು, ರೈತ ಹೋರಾಟವನ್ನು ಅವಮಾನಿಸಿದ್ದಾರೆ. ಸರಕಾರ ಮತ್ತೊಮ್ಮೆ ರೈತ ವಿರೋಧಿ ಕ್ರಮಕ್ಕೆ ಮುಂದಾದರೆ ಅನ್ನದಾತರು ಮತ್ತೆ ಸತ್ಯಾಗ್ರಹಕ್ಕೆ ಮುಂದಾಗುತ್ತಾರೆ . ಮಾತ್ರವಲ್ಲ ಸರಕಾರದ ಅಹಂಕಾರವನ್ನು ಒಮ್ಮೆ ಹತ್ತಿಕ್ಕಿ ಸತ್ಯಾಗ್ರಹ ಮಾಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…